ಪಿಂಚಣಿ ಹೆಸರಲ್ಲಿ ಸರ್ಕಾರಕ್ಕೆ ವಂಚನೆ: ಸೈಬಣ್ಣ ಜಮಾದಾರ ಆರೋಪ

ಕಲಬುರಗಿ: ಗ್ರಾಮದಲ್ಲಿ ವಾಸವಾಗಿರುವ ಜನಸಂಖ್ಯೆಗಿಂತ ಹೆಚ್ಚಿನ ಜನರು ವಿವಿಧ ಪಿಂಚಣಿಗಳ ಪಡೆಯುವ ಮೂಲಕ ಸರಕಾರಕ್ಕೆ ದೋಖಾ ಮಾಡಲಾಗುತ್ತಿದೆ, ಇದಕ್ಕೆ ಪುಷ್ಠಿ ನೀಡಿರುವ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಜರುಗಿಸಬೇಕೆಂದು  ಅಹಿಂದ ಚಿಂತಕರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೈಬಣ್ಣ ಜಮಾದಾರ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಅಫಜಲಪೂರ ತಾಲೂಕಿನ ಶೇಷಗಿರಿವಾಡಿ ಗ್ರಾಮದಲ್ಲಿ 1311 ಜನ ಮತದಾರರಿದ್ದು ಅಲ್ಲಿ ವಿವಿಧ ಪಿಂಚಣಿ ಪಡೆಯುವರ ಸಂಖ್ಯೆ 1687 ಜನರಿದ್ದಾರೆ, ಯಡ್ರಾಮಿ ತಾಲೂಕಿನ ಮೂರಗನೂರ ಗ್ರಾಮದಲ್ಲಿ 1024 ಜನರಿದ್ದು ಇಲ್ಲಿ 1047 ಜನರು ವಿವಿಧ ಪಿಂಚಣಿ ಪಡೆಯುತ್ತಿದ್ದಾರೆ, ಕಮಲಾಪೂರ ತಾಲೂಕಿನ ವಡಗೇರಾ ಗ್ರಾಮದಲ್ಲಿ 293 ಜನ ಮತದಾರರಿದ್ದು, 1073 ಜನ ಪಿಂಚಣಿದಾರರು ಇದ್ದಾರೆ, ಚಿಂಚೋಳಿ ತಾಲೂಕಿನ ವಂಟಿಗುಡಸಿ ತಾಂಡಾದಲ್ಲಿ 359 ಜನ ಮತದಾರರಿದ್ದು ಇಲ್ಲಿ ಪಿಂಚಣಿ ಪಡೆಯುವರ ಸಂಖ್ಯೆ 800ಕ್ಕೂ ಹೆಚ್ಚು ಜನರಿದ್ದಾರೆಂದು ದೂರಿದರು.

ಗ್ರಾಮಗಳಲ್ಲಿ ವಾಸಿಸುವವರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ವೃದ್ದಾಪ್ಯ, ವಿಧವಾ ವೇತನ ಸೇರಿದಂತೆ ವಿವಿಧ ಪಿಂಚಣಿ ಪಡೆಯಲಿಕ್ಕೆ ಆಯ್ಕೆಯಾದ ಸಂದರ್ಭದಲ್ಲಿದ್ದ ಅದಿಕಾರಿಗಳ ಯಡವಟ್ಟು ಇದಾಗಿದ್ದು, ತಕ್ಷಣವೇ ಜಿಲ್ಲಾದಿಕಾ ರಿಗಳು ಮತ್ತು ಸಂಬಂಧಪಟ್ಟ ಅದಿಕಾರಿಗಳು ಗಮನ ಹರಿಸಿ ಸರಕಾರದ ದುಡ್ಡು ವ್ಯಥಾ ಹಾಳಾಗುತ್ತಿರುವುದನ್ನು ತಡೆಯಲು ಸೂಕ್ತ ಕ್ರಮ ಜರುಗಿಸಿ ತಪ್ಪಿತಸ್ಥರ ವಿರುದ್ಧ ಕಾನೂನುಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ರಮೇಶ, ಹಡಪದ, ಸಂಜು ಹೊಡಲ್ಕರ್, ಯಶ್ವಂತರಾವ ಸೂರ್ಯವಂಶಿ, ವಿಜಯಕುಮಾರ ಮಠಪತಿ, ವಿನೋದಕುಮಾರ ಇದ್ದರು.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

8 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

17 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

17 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

18 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

20 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420