ಬಿಸಿ ಬಿಸಿ ಸುದ್ದಿ

ಸಮಾಜಕ್ಕೆ ಛಾಯಾಗ್ರಾಹಕರ ಕೊಡುಗೆ ಅನನ್ಯ

ಶಹಾಬಾದ: ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ. ವರ್ಣಿಸಲಾಗದ ದೃಶ್ಯವನ್ನು ನೈಜವಾಗಿ ಸೆರಹಿಡಿಯುವ ಕಲೆ ಕ್ಯಾಮರಾ ಮತ್ತು ಛಾಯಾಗ್ರಾಹಕರು ಹೊಂದಿದ್ದಾರೆ. ಇದರಿಂದ ಆ ಸಂದರ್ಭ ಖುದ್ದಾಗಿ ವೀಕ್ಷಿಸಿದ ಅನುಭವ ಉಂಟಾಗುವಂತೆ ಮಾಡಿ, ಅಲ್ಲಿನ ಸ್ಥಿತಿ-ಗತಿಯ ನೈಜ ಚಿತ್ರಣ ನೀಡುವ ಕೆಲಸ ಮಾಡುವ ಛಾಯಾಗ್ರಾಹಕರ ಕೊಡುಗೆ ತುಂಬಾ ಅನನ್ಯವಾಗಿದೆ ಎಂದು ಮುಖಂಡರಾದ ಸುರೇಶ ಮೆಂಗನ್ ಹೇಳಿದರು.

ಅವರು ನಗರದ ಜಿಇ ಕಾಲೋನಿಯ ಎಮ್‍ಸಿಸಿ ಶಾಲೆಯಲ್ಲಿ ಯುವ ಛಾಯಾಚಿತ್ರಕಾರ ಖಾಜಾ ಪಟೇಲ ಅವರು ಆಯೋಜಿಸಿದ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕ್ಯಾಮರಾ ಮಾನವನ ಕಣ್ಣುಗಳಿಂದ್ದಂತೆ. ಕೆಲವು ಸಲ ನಾವೂ ನೋಡಿದ್ದು ನೆನಪಿಗೆ ಬರದಿದ್ದರೂ, ಕ್ಯಾಮಾರಾವು ಶಾಶ್ವತ ದಾಖಲೆಯನ್ನು ಒದಗಿಸುತ್ತದೆ. ಪ್ರಸ್ತುತವಾಗಿ ಮೋಬೈಲ್ ಯುಗದಲ್ಲಿ ಛಾಯಾಗ್ರಾಹಕರು ತೀರ್ವ ಸ್ಪರ್ಧೆಯನ್ನು ಎದುರಿಸಿ ಕಾರ್ಯನಿರ್ವಹಿಸಬೇಕಾಗಿರುವುದು ಒಂದು ಸವಾಲಿನ ಕಾರ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಾಸುದೇವ ಚಹ್ವಾಣ ಮಾತನಾಡಿ, ಒಂದು ಚಿತ್ರ ಸಾವಿರ ಪದಗಳಿಗೆ ಸಮ, ಛಾಯಾಗ್ರಹಣಕ್ಕೆ ಇರುವ ಸಾಮಥ್ರ್ಯವೇ ಅಂತಹದ್ದು, ಪದಗಳಲ್ಲಿ ವರ್ಣಿಸಲು ಸಾಧ್ಯವಾದ ಅದೇμÉ್ಟೂೀ ಮಾತುಗಳನ್ನು ಕೇವಲ ಒಂದು ಚಿತ್ರ ಬಿಡಿಸುತ್ತದೆ ಎಂದು ಹೇಳಿದರು.

ಎಮ್‍ಸಿಸಿ ಶಾಲೆಯ ಸಿಸ್ಟರ್ ರಿಷಿಕ ರೋಸ್ ಮಾತನಾಡಿ, ಛಾಯಾಗ್ರಹಣವು ಒಂದು ಕಲಾ ಪ್ರಕಾರವಾಗಿದ್ದು, ಇದು ದೃಶ್ಯ ರೂಪದಲ್ಲಿ ಕ್ಷಣಗಳು ಮತ್ತು ಭಾವನೆಗಳನ್ನು ಸೆರೆಹಿಡಿಯುವ ಒಂದು ಅದ್ಭುತವಾಗಿದೆ. ಛಾಯಾಗ್ರಹಣದ ಹಿಂದಿನ ಕಲೆ, ವಿಜ್ಞಾನ ಮತ್ತು ಇತಿಹಾಸವನ್ನು ಸ್ಮರಿಸಲು ಪ್ರಪಂಚದಾದ್ಯಂತ ವಿಶ್ವ ಛಾಯಾಗ್ರಹಣ ದಿನವನ್ನು ಆಚರಿಸಲಾಗುತ್ತದೆ ಎಂದರು.

ವಿದ್ಯಾರ್ಥಿಗಳ ಪಾಲಕ ಪೆÇೀಷಕರ ಸಂಘದ ಅಧ್ಯಕ್ಷ ಸುನಿಲ ಭಗತ್ ವೇದಿಕೆಯಲ್ಲಿ ಇದ್ದರು. ಛಾಯಾಚಿತ್ರಕಾರ ಖಾಜಾ ಪಟೇಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು, ಭರತ ಧನ್ನಾ ನಿರೂಪಿಸಿದರು, ರವಿ ದಾಚಂಪಲ್ಲಿ ವಂದಿಸಿದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago