ಶಹಾಬಾದ: ನಗರದಲ್ಲಿ ಮಡಿವಾಳ ಮಾಚಿದೇವ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಮಡಿವಾಳ ಅವರ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಸಭೆ ನಡೆಯಿತು.
ಪಿಎಎಸ್ಐ ಚಂದ್ರಕಾಂತ ಮಕಾಲೆ ಅವರನ್ನು ಸಂಘದ ವತಿಯಿಂದ ಸನ್ಮಾನ ಮಾಡಲಾಯಿತು.
ಮಡಿವಾಳ ಮಾಚಿದೇವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಕಾಂತ ಮಡಿವಾಳ ಮಾತನಾಡಿ,ಸಮಾಜದ ಜನರು ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಸಮಾಜದ ಅಭಿವೃದ್ಧಿಗೆ ಶ್ರವಹಿಸಬೇಕು.ಅಲ್ಲದೇ ಸಮಾಜದ ಮಕ್ಕಳು ಶಿಕ್ಷಿತರಾದರೆ ಮಾತ್ರ ಸಮಾಜದ ಏಳ್ಗೆ ಸಾಧ್ಯ.ಆ ನಿಟ್ಟಿನಲ್ಲೂ ಹೆಚ್ಚಿ ಗಮನಹರಿಸಬೇಕು.ಸಮಾಜದ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು. ಸಂಘವು ರುದ್ರಭೂಮಿ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಮನವಿ ಪತ್ರ ಸಲ್ಲಿಸಿದೆ.ಅವರು ಕೂಡ ಭರವಸೆ ನೀಡಿದ್ದಾರೆ.ಆದಷ್ಟು ಎಲ್ಲರೂ ಈ ಕಾರ್ಯಕ್ಕೆ ಕರ್ಯಪ್ರವೃತ್ತರಾಗೋಣ ಎಂದರು.
ಗೌರವ ಅಧ್ಯಕ್ಷ ರಾಜು ಮಡಿವಾಳ, ಉಪಾಧ್ಯಕ್ಷ ಗುಂಡಪ್ಪ ಮಡಿವಾಳ ಹಾಗೂ ಪ್ರಧಾನ ಕಾರ್ಯದರ್ಶಿ ಬಸವರಾಜ ಪರೀಟ್ ಮಾತನಾಡಿ, ಮಡಿವಾಳ ಮಾಚಿದೇವ ನಿಗಮ ಮಂಡಳಿಗೆ ನಮ್ಮ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಮಡಿವಾಳ ಅವರನ್ನು ನಾಮನಿರ್ದೇಶನ ಮಾಡಲು ಒತ್ತಾಯಿಸಲಾಗುವುದೆಂದು ತಿಳಿಸಿದರು.
ಮಲ್ಲೇಶ್ ಮಡಿವಾಳ ವಾಡಿ ,ಸಾಬಣ್ಣ ಮಡಿವಾಳ , ಶಶಿಕಾಂತ ಮಡಿವಾಳ, ನಾಗು ಮಡಿವಾಳ, ಹಿರಿಯ ಮುಖಂಡರಾದ ಮನೋಹರ್ ಮಡಿವಾಳ,ರಾಜು ಮಡಿವಾಳ, ಮಡಿವಾಳಪ್ಪ ಮಡಿವಾಳ, ರೇವಪ್ಪ ಪರೀಟ್ ಇದ್ದರು.
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…