ಬಿಸಿ ಬಿಸಿ ಸುದ್ದಿ

ಶ್ರೀ ಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ

ವಾಡಿ: ಬಸವಾದಿ ಶರಣರ ತತ್ವ ಆದರ್ಶ ಪ್ರತಿಯೊಬ್ಬರೂ ಅಳವಡಿಸಿಕೊಂಡು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕು ಎಂದು ರಾವೂರಿನ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು.

ಶ್ರಾವಣ ಮಾಸಾಚರಣೆ ನಿಮಿತ್ತ ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯದಲ್ಲಿ ಏರ್ಪಡಿಸಿದ್ದ ಶಿವಲಿಂಗ ಪೂಜೆ ಹಾಗೂ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಬಸವಾದಿ ಶರಣರು ಕಾಯಕದ ಮೇಲೆ ಶ್ರದ್ಧಾ ಭಕ್ತಿ ಇಟ್ಟು ಮಾನವ ಕುಲಕ್ಕೆ ಹಾಗು ಸಮಾಜಕ್ಕೆ ಮಾದರಿಯಾಗಿದ್ದರು.

ಆದರೆ ಇಂದಿನ ಯುವ ಜನಾಂಗದಲ್ಲಿ ಸಂಯಮ ಕಡಿಮೆಯಾಗುತ್ತಿದ್ದು, ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದೆ. ಸಂಯಮ ಸಂಸ್ಕೃತಿಯನ್ನು ಮತ್ತೆ ಬೆಳೆಸಬೇಕಾದರೆ ಸ್ವಾಮಿ ವಿವೇಕಾನಂದ, ಬಸವಣ್ಣನಂತಹ ಮಹಾಪುರುಷರ ತತ್ವ ದರ್ಶನ ಅವಶ್ಯವಾಗಿ ಬೇಕಾಗಿದೆ ಎಂದರು.

ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಗೌಡ ಪಾಟೀಲ ಚಾಮನೂರ, ದೇವಸ್ಥಾನ ಸಮಿತಿ ಅಧ್ಯಕ್ಷ ಶಾಂತಪ್ಪ ಶೆಳ್ಳಗಿ, ಮುಖಂಡರಾದ ಪರುತಪ್ಪ ಕರದಳ್ಳಿ, ಸಿದ್ದಣ್ಣ ಕಲಶೆಟ್ಟಿ, ಅಣ್ಣಾರಾವ ಪಸಾರೆ, ಬಸವರಾಜ ಶೆಟಗಾರ, ಮಲ್ಲಣ್ಣಗೌಡ ಗೌಡಪ್ಪನೋರ, ಚನ್ನಪ್ಪ ಸೂಲಹಳ್ಳಿ, ಸಂಗಣ್ಣ ಇಂಡಿ, ಅಮೃತಪ್ಪ ದಿಗ್ಗಾಂವ, ಅಶೋಕ ಖಾನಕುರ್ತೆ, ವೀರಣ್ಣಗೌಡ ನಾಲವಾರ, ವೀರಣ್ಣ ಯಾರಿ, ಮಹಾಲಿಂಗ ಶೆಳ್ಳಗಿ, ಕಾಶೀನಾಥ ಶೆಟಗಾರ, ಬಸವರಾಜ ಯರಗಲ್, ನಿಂಗಣ್ಣ ದೊಡ್ಡಮನಿ, ಅಯ್ಯಪ್ಪ ಪಂಚಾಳ, ಶ್ರೀಶೈಲ ಜಿರೊಳಿ, ವಿಶ್ವನಾಥ ಪಡಶೆಟ್ಟಿ, ರಾಜಶೇಖರ ಧೂಪದ, ಕಾಶಿನಾಥ ಪಾನಗಾಂವ, ಮಹಾಂತಗೌಡ ಗುಡೂರ, ಸತೀಶ ಸಾವಳಗಿ, ವಿಶಾಲ ಕಲಶೆಟ್ಟಿ, ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

53 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

56 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

59 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago