ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡ ಇಲಾಖೆಗೆ ನೂತನವಾಗಿ ರಾಜ್ಯ ನಿರ್ದೇಶಕರಾಗಿ ನೇಮಕವಾಗಿರುವ ಕಲ್ಲೇಶ ಅವರನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಜ್ಯ ನಿಯೋಗ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ರಾಜ್ಯದ ವಿವಿಧ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ಬೆಂಗಳೂರು ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ರಾಜ್ಯದಲ್ಲಿನ ಪರಿಶಿಷ್ಟ ಪಂಗಡ ಹಾಸ್ಟೆಲ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು, ಇತ್ತೀಚೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ಎಸ್ ಟಿ ಬಾಲಕಿಯರ ಹಾಸ್ಟೆಲ್ ನಲ್ಲಿ ಚಿಕನ್ ಊಟ ಸೇವಿಸಿ ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆಯಾಗಿ ವಾಂತಿ ಭೇದಿಯಿಂದ ಹೊಸಪೇಟೆ ತಾಲ್ಲೂಕು ಆಸ್ಪತ್ರೆಗೆ ದಾಖಲಾದ ಪ್ರಕರಣದ ಬಗ್ಗೆ, ಬಳ್ಳಾರಿ ನಗರದ ಕೌಲಬಜಾರ ಎಸ್ ಟಿ ಬಾಲಕರ ಹಾಸ್ಟೆಲ್ ಪ್ರಕರಣ, ಹಾಗೂ ರಾಯಚೂರು ಹಾಸ್ಟೆಲ್ ಗಳ ಸ್ಥಿತಿಗತಿಗಳ ಕುರಿತು ಎಸ್ಎಫ್ಐ ನಿಯೋಗ ಚರ್ಚೆ ಮಾಡಲಾಯಿತು.
ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆ ಹೆಚ್ಚಳ ಮಾಡಿ ಮಂಜೂರು ಮಾಡಲು ಆಗ್ರಹ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ, ರಾಜ್ಯ ಪದಾಧಿಕಾರಿಗಳಾದ ಗಣೇಶ ರಾಠೋಡ್, ರಮೇಶ ವೀರಾಪೂರು, ಗದಗ ಜಿಲ್ಲೆಯ ಜಿಲ್ಲಾ ಮುಖಂಡ ಚಂದ್ರು ರಾಠೋಡ್ ಉಪಸ್ಥಿತರಿದ್ದರು.