ಕಲಬುರಗಿ: 2006ರ ಪೂರ್ವದ ಶಾಲೆ-ಕಾಲೇಜುಗಳಿಗೆ ನೇಮಕಾತಿಯಾಗಿ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಪಿಂಚಣಿ ಸೌಲಭ್ಯ ಸೇರಿ ಯಾವುದೇ ಸರಕಾರಿ ಸೌಲಭ್ಯಗಳು ಸಿಕ್ಕಿಲ್ಲ. ಹೀಗಾಗಿ ಸರಕಾರ ನಿವೃತ್ತ ಮತ್ತು ಸೇವೆಯಲ್ಲಿರುವ ನೌಕರರಿಗೆ ಹಳೆ ಪಿಂಚಣಿ ಸೇರಿ ಸರ್ಕರಿ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿ ಆ.29ರಂದು ನೌಕರರ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು 2006 ಪೂರ್ವದ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತರ ವೇದಿಕೆ ರಾಜ್ಯ ಗೌರವಾಧ್ಯಕ್ಷ ಪಿ.ಎಸ್.ಕೋಟನೂರ ತಿಳಿಸಿದರು.
ಆ.29ರಂದು ಮೈಸೂರಿನ ಸುತ್ತೂರು ಮಠದಲ್ಲಿ ಸಮಾವೇಶ ನಡೆಯಲಿದೆ. ಜಿಲ್ಲೆಯಿಂದ 2000ಕ್ಕೂ ಅಧಿಕ ನೌಕರರು ತೆರಳಲಿದ್ದಾರೆ. ಸಮಾವೇಶದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಕಾಲೇಜು, ಬಿಇಡ್, ವೃತ್ತಿಪರ ಕೋರ್ಸ್ ಪಿಂಚಣಿ ವಂಚಿತ ಸುಮಾರು 10 ಸಾವಿರಕ್ಕೂ ಅಧಿಕ ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುಮಾರು 15-20 ವರ್ಷಗಳಿಂದ ವೇತನವಿಲ್ಲದೆ ಸೇವೆ ಸಲ್ಲಿಸಿದ್ದೇವೆ. ಈಗಾಗಲೇ ನೂರಾರು ನೌಕರರು 7ರಿಂದ 8 ವರ್ಷ ಸೇವೆ ಸಲ್ಲಿಸಿ ಸರಕಾರಿ ಸೌಲಭ್ಯವಿಲ್ಲದೆ ಹೊರಬಂದಿದ್ದೇವೆ. ಸದ್ಯ ನಮ್ಮ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಸರಕಾರ ನಮ್ಮ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದರು. ಅಧ್ಯಕ್ಷ ಮರೆಪ್ಪ ಎಂ.ಬಸವಪಟ್ಟಣ, ಬಿ.ಜಿ.ಪಾಟೀಲ್, ಚಂದ್ರಶೇಖರ ಗಾರಂಪಳ್ಳಿ, ಲಕ್ಷ್ಮಿಕಾಂತ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…