ಬಿಸಿ ಬಿಸಿ ಸುದ್ದಿ

ಬುದ್ಧ, ಬಸವ, ಅಂಬೇಡ್ಕರ್ ಹಿರೋಗಳನ್ನಾಗಿ ಕಾಣಿ : ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಕರೆ

ಕಲಬುರಗಿ: ವಿದ್ಯಾರ್ಥಿಗಳು ಬುದ್ಧ, ಬಸವಣ್ಣ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ನಿಮ್ಮ ಜೀವನದ ನಿಜವಾದ ಹೀರೋಗಳನ್ನಾಗಿ ಕಾಣಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹೇಳಿದರು.

ನಗರದ ಕೋಟನೂರ ರಸ್ತೆಯ ಶ್ರೀ ಗುರುಪಾದೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಚಿತ್ರನಟರನ್ನು ತಮ್ಮ ಹಿರೋಗಳೆಂದು ಭಾವಿಸಿ ವಿದ್ಯಾರ್ಥಿಗಳು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ನೀವು ನಿಜವಾದ ಹಿರೋ ಎಂದರೆ ಬುದ್ಧ, ಬಸವ ಮತ್ತು ಡಾ.ಅಂಬೇಡ್ಕರ್ ಅವರಂತ ನಾಯಕರನ್ನು ಮಾದರಿಯಾಗಿಟ್ಟುಕೊಂಡು ಅಭ್ಯಾಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಹೋರಾಟಗಾರ ದಿ.ಎಂ.ಬಿ. ಅಂಬಲಗಿ ಅವರು ಸ್ಥಾಪಿಸಿದ ಈ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು. ಚಿತ್ತಾಪುರ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಸಿದ್ದಣ್ಣ ಕುಳಗೇರಿ ಮಾತನಾಡಿ, ಈ ಎರಡು ವರ್ಷ ನಿಮ್ಮ ಜೀವನದ ಪ್ರಮುಖ ಘಟ್ಟ. ಹೀಗಾಗಿ ಸಮಯ ವ್ಯರ್ಥ ಮಾಡದೆ ಶ್ರಮಪಟ್ಟು ಅಭ್ಯಾಸ ಮಾಡಿ ನಿಮ್ಮ ತಂದೆ-ತಾಯಿ ಮತ್ತು ಕಾಲೇಜಿಗೆ ಹೆಸರು ತರಬೇಕು ಎಂದು ಹೇಳಿದರು.

ಖ್ಯಾತ ವೈದ್ಯ ಡಾ.ಸಿ.ಎಸ್.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆ ಅಧ್ಯಕ್ಷ ವಾದಿರಾಜ ವ್ಯಾಸಮುದ್ರ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ನಿರ್ದೆಶಕರಾದ ಮೊಹಿನಿ ಬುದೂರ, ಉಪಾಧ್ಯಕ್ಷ ದೇವಿಂದ್ರಪ್ಪ ಅವಂಟಿ, ಸದಸ್ಯರಾದ ಸಿದ್ದರಾಮಯ್ಯ ಮಠ, ಚನ್ನಬಸಯ್ಯ ಗುರುವಿನ, ಉಪನ್ಯಾಸಕರಾದ ಸಿ.ಎಸ್.ಆನಂದ, ಸಮೀರ ಸಾವಳಗಿ, ಜ್ಯೋತಿ, ಭಾಗ್ಯಶ್ರೀ, ಮರೀಶಾ, ನಿಶಿತಾ ಹಾಗೂ ಅನಘ ವಾಸಮುದ್ರ, ಸವಿತಾ ಬಿರಾದಾರ ಇತರರಿದ್ದರು.

ಸಂಸ್ಥೆ ಕಾರ್ಯದರ್ಶಿ ಗುರುಪ್ರಸಾದ ಅಂಬಲಗಿ ಪ್ರಾಸ್ತಾವಿಕ ಮಾತನಾಡಿದರು. ಜಾನಕಿ ಪ್ರಾರ್ಥನಾ ಗೀತೆ ಹಾಡಿದರು. ವಿನೂತ ಸ್ವಾಗತಿಸಿದರು. ಸೋನುಬಾಯಿ ವಂದಿಸಿದರು. ಸುಹಾಸಿನಿ ಹಾಗೂ ಸ್ನೇಹ ನಿರೂಪಣೆ ಮಾಡಿದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

30 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

38 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago