ಕಲಬುರಗಿ: ಕಲ್ಯಾಣ ಕರ್ನಾಟಕದ ಮಾದಿಗ ಸಮಾಜದ ನಾಯಕರಾದ ಲಿಂಗರಾಜ್ ತಾರಫೈಲ್ ಅವರಿಗೆ ಬಾಬು ಜಗಜೀವನ ರಾಮ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡಬೇಕು ಎಂದು ಮಾದಿಗ ಸಮಾಜ ಸಮನ್ವಯ ಸಮಿತಿಯ ಮುಖಂಡರಾದ ಶಿವಕುಮಾರ ಗೋಕುಲ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಮಾದಿಗ ಸಮಾಜದ ಏಳಿಗೆಗಾಗಿ ಮತ್ತು ಸಮಾಜವನ್ನು ಜಾಗೃತಿ ಮೂಡಿಸುವಲ್ಲಿ ಹಲವಾರು ವರ್ಷಗಳ ಕಾಲ ಸಮಾಜಕ್ಕಾಗಿ ಹಗಲು ರಾತ್ರಿ ಲೆಕ್ಕಿಸದೆ ಸಮಾಜವನ್ನು ಕಟ್ಟುವಲ್ಲಿ ಲಿಂಗರಾಜ ತಾರಫೈಲ ಅವರ ಕಾರ್ಯ ನಮ್ಮ ಸಮಾಜಕ್ಕೆ ಬಹಳ ಅವಶ್ಯಕತೆ ಇದೆ.
ಈ ಬಾರಿ ನಡೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಶಾಸಕರು ಆಗಿದ್ದಾರೆ. ಲಿಂಗರಾಜ ತಾರಫೈಲ ಅವರ ಕೂಗಿಗೆ ಕಲ್ಬುರ್ಗಿ ದಕ್ಷಿಣ ಮತಕ್ಷೇತ್ರ ಸೇರಿ ಇತರೆ ಕ್ಷೇತ್ರದಲ್ಲಿ ಮಾದಿಗ ಸಮಾಜದ ಮತಬಾಂಧವರು ಕಾಂಗ್ರೆಸ್ ಪಕ್ಷ ಬೆಂಬಲಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸಿದ್ದಾರೆ. ಬಾಬು ಜಗಜೀವನರಾಮ ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದರೆ.
ಮುಂದಿನ ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ತರುವಲ್ಲಿ ಮತ್ತು ಅಭ್ಯರ್ಥಿಗಳ ಪರ ಕಾರ್ಯ ನಿರ್ವಹಿಸುತ್ತಾರೆ. ಇವರ ಕಾರ್ಯವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಕ್ತವಾಗಿ ಪರಿಗಣಿಸಿ ಬಾಬು ಜಗಜೀವನರಾಮ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಬೇಕೆಂದು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದರು.