ಬಿಸಿ ಬಿಸಿ ಸುದ್ದಿ

ಚಿಕ್ಕನಹಳ್ಳಿ: ಕಲುಷಿತ ನೀರು ಸೇವಿಸಿ 24 ಮಕ್ಕಳು ಅಸ್ವಸ್ಥ

ಸುರಪುರ: ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 24 ಮಕ್ಕಳು ಅಸ್ವಸ್ಥಗೊಂಡಿದ್ದು ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ.ಗ್ರಾಮದಲ್ಲಿನ ಶುದ್ಧ ನೀರಿನ ಘಟಕ ಕೆಟ್ಟು ನಿಂತು ತಿಂಗಳುಗಳಾದರು ಇದುವರೆಗೆ ಅದನ್ನು ದುರಸ್ತಿಗೊಳಿಸಿಲ್ಲ,ಗ್ರಾಮದಲ್ಲಿನ ಜನರಿಗೆ ಈಗ ಕುಡಿಯಲು ಬೋರವೆಲ್ ನೀರೆ ಗತಿಯಾಗಿದೆ.ಆದರೆ ಕೆಟ್ಟು ನಿಂತಿದ್ದ ಬೋರವೆಲ್ ಕೂಡ ಇತ್ತೀಚೆಗೆ ಕೆಲ ದಿನಗಳ ಹಿಂದೆ ರಿಪೇರಿ ಮಾಡಲಾಗಿದ್ದು,ಈ ಬೋರವೆಲ್‍ಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಹೇಳಲಾಗುತ್ತಿದೆ.ಆದರೆ ಶುದ್ಧ ನೀರು ಇಲ್ಲದ್ದರಿಂದ ಗ್ರಾಮದಲ್ಲಿ ಶಾಲೆಯ ಮಕ್ಕಳು ಬೋರವೆಲ್ ನೀರು ಕುಡಿದಿದ್ದರಿಂದ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ.

ಶನಿವಾರ ದಿಂದಲೇ ವಾಂತಿ ಭೇದಿ ಕಾಣಿಸಿಕೊಂಡಿದ್ದು ಕೆಲವರು ಮೊದಲು ತಾಲೂಕು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಂಡು ಹೋಗಿದ್ದಾರೆ.ಆದರೆ ದಿನೆ ದಿನೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.ರವಿವಾರ ರಾತ್ರಿ 5 ಮಕ್ಕಳು ಅಸ್ವಸ್ಥಗೊಂಡು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಲ್ಲದೆ ಸೋಮವಾರ ಮುಂಜಾನೆ ಗ್ರಾಮಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಭೇಟಿ ನೀಡಿ ಪರಿಶೀಲಿಸಿದ್ದು,ಗ್ರಾಮದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಅಲ್ಲದೆ ಗ್ರಾಮದಲ್ಲಿನ ಎಲ್ಲರು ನೀರನ್ನು ಕಾಯಿಸಿ ಆರಿಸಿ ಸೋಸಿ ಕುಡಿಯುವಂತೆ ತಿಳಿಸಿದ್ದಾರೆ.

ಪ್ರಕರಣಗಳು ಹೆಚ್ಚುತ್ತಿರುವ ಕಾರಣ ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೂ ಮಕ್ಕಳನ್ನು ಕರೆದುಕೊಂಡು ಹೋಗಿರುವ ಮಾಹಿತಿ ತಿಳಿದ ತಾಲೂಕು ಆರೋಗ್ಯಾಧಿಕಾರಿಗಳು ತಕ್ಷಣಕ್ಕೆ ಗ್ರಾಮದ ಶಾಲೆಯಲ್ಲಿಯೇ ತಮ್ಮ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಕರೆಯಿಸಿ ಚಿಕಿತ್ಸೆಯನ್ನು ನೀಡಲಾರಂಭಿಸಿದ್ದು,ಸದ್ಯ ಎಲ್ಲಾ ಮಕ್ಕಳು ಗುಣಮುಖರಾಗುತ್ತಿದ್ದಾರೆ ಎನ್ನಲಾಗಿದೆ.ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಇಓ ಬಸವರಾಜ ಸಜ್ಜನ್ ಸೇರಿ ಅನೇಕರು ಭಾಗವಹಿಸಿದ್ದರು.

ಬಾಕ್ಸ್ ಮಾಡಿ ಹಾಕಿಕೊಳ್ಳಿ: ಚಿಕ್ಕನಹಳ್ಳಿ ಭತ್ತ ನಾಟಿ ಕೆಲಸಕ್ಕೆಂದು ಆಗಮಿಸಿದ್ದ ಕೂಲಿ ಕಾರ್ಮಿಕರು ಅರೆಬೆಂದ ಮಾಂಸಹಾರ ಸೇವಿಸಿ ವಾಂತಿ ಭೇದಿಯಿಂದ ಬಳಲಿದ್ದಾರೆ.8 ಜನರು ಅಸ್ವಸ್ಥಗೊಂಡಿದ್ದು ಎಲ್ಲರಿಗೂ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗುಣಮುಖರಾಗಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ತಿಳಿಸಿದ್ದಾರೆ.

ಚಿಕ್ಕನಹಳ್ಳಿ ಗ್ರಾಮದಲ್ಲಿ ಮೂರು ದಿನಗಳಿಂದ ಜನರು ವಾಂತಿ ಭೇದಿಗೆ ತುತ್ತಾಗುತ್ತಿರುವಾಗ ಗ್ರಾಮದಲ್ಲಿ ಖಾಸಗಿಯವರಿಂದ ಶುದ್ಧ ಕುಡಿಯುವ ನೀರಿನ ಘಟಕವೊಂದನ್ನು ಆರಂಭಿಸಲಾಗಿದ್ದು,ಅಧಿಕಾರಿಗಳು ತೋರಿರುವ ನಿರ್ಲಕ್ಷ್ಯ ದಿಂದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥಿಗೊಳಿಸದೆ ಇರುವುದರಿಂದ ಜನರು ಶುದ್ಧ ನೀರನ್ನು ಖಾಸಗಿಯವರಿಂದ ಹಣ ಕೊಟ್ಟು ಖರಿದಿಸಿ ಕುಡಿಯುವ ಸ್ಥಿತಿ ನಿರ್ಮಾಣವಾಗಿದೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago