ಕಲಬುರಗಿ ಶ್ರೀ ಶರಣಬಸವೇಶ್ವರ ಅಂಗಳದಲ್ಲಿ ಭಕ್ತ ಸಾಗರ

ಕಲಬುರಗಿ: ಜಗತ್ ಬಡಾವಣೆಯಲ್ಲಿರುವ ಗೋಮುಖ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ 31ರಂದು ಪೂರ್ವಾರಾಧನೆ ನಿಮಿತ್ಯ ಬೆಳಿಗ್ಗೆ 7 ರಿಂದ 9ರ ವರೆಗೆ ವಿಷ್ಣು ಸಹಸ್ರನಾಮ, ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟೋತ್ತರ ಪಾರಾಯಣ, ಪಂಚಾಮೃತ ಅಭೀಷೇಕ ಹಾಗೂ ಶ್ರೀ ಗುರುಗಳಿಗೆ ವಿಶೇಷ ಪೂಜೆ. ಸಾಯಂಕಾಲ 7 ರಿಂದ 9ರ ವರೆಗೆ ಶ್ರೀ ಗುರುಸಾರ್ವಭೌಮ ಭಜನಾ ಮಂಡಳಿಯಿಂದ ಭಜನೆ ನಂತರ ಮಹಾಮಂಗಳಾರುತಿ ಜರುಗಲಿದೆ.

ಅಲ್ಲದೇ ಪಂ. ವಿಷ್ಣುದಾಸಾಚಾರ್ಯರಿಂದ ಪ್ರವಚನ ಜರುಗಲಿದದು, ಮುಖ್ಯ ಅತಿಥಿಗಳಾಗಿ ಖ್ಯಾತ ನೇತ್ರ ತಜ್ಞರಾದ ಡಾ. ಉದಯ ಪಾಟೀಲ ಮತ್ತು ಖ್ಯಾತ ಮುಖರೋಗ ಚಿಕಿತ್ಸಾ ತಜ್ಞರಾದ ಡಾ. ಉಡುಪಿಕೃಷ್ಣ ಜೋಷಿ ಅವರುಗಳು ಆಗಮಿಸಲಿದ್ದಾರೆ.

ಮಧ್ಯಾರಾಧನೆ ಸೆಪ್ಟಂಬರ್ 1ರಂದು ಬೆಳಿಗ್ಗೆ 8 ರಿಂದ 9ರ ವರೆಗೆ ಶ್ರೀ ಪೂರ್ಣ ಪ್ರಜ್ಞ ಪಾರಾಯಣ ಸಂಘದಿಂದ ಅಷ್ಟೋತ್ತರ, 9 ರಿಂದ 10.30ರ ವರೆಗೆ ಶ್ರೀ ಗುರುಸಾರ್ವಭೌಮರ ಉತ್ಸವ ಮೂರ್ತಿಯ ಪಲ್ಲಕ್ಕಿಯ ಗ್ರಾಮ ಪ್ರದಕ್ಷಿಣೆ. ನಡೆಯಲಿದೆ.

ಮುಂಜಾನೆ 11 ಗಂಟೆಗೆ ಪ್ರವಚನ ಕಾರ್ಯಕ್ರಮ ನಡೆಯಲಿದ್ದು, ವೇದಶಾಸ್ತ್ರ ಪಂಡಿತರಾದ ಶ್ರೀ ಗೋಪಾಲಾಚಾರ್ಯ ಅಕಮಂಚಿ ಅವರು ಪ್ರವಚನ ನಡೆಸಿಕೊಡಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ಅಲ್ಲಮ ಪ್ರಭು ಪಾಟೀಲ, ಜ್ಞಾನಪೂರ್ಣ ಪ್ರತಿಷ್ಠಾನ ಬೆಂಗಳೂರು ಸಂಸ್ಥಾಪಕರು ಹಾಗೂ ಸಮಜಾ ಸೇವಕಿ ಕು. ಪೂರ್ಣಿಮಾ ಬಾರಿಮನಿ, ಆಕಾಶವಾಣಿ ಕಲಾವಿದರು ಹಾಗೂ ಸಾಹಿಗಳಾದ ಶ್ರೀಮತಿ ಸೀತಾ ಮಲ್ಲಾಬಾದಿ ಮತ್ತು ಮಹಾನಗರಪಾಲಿಕೆ ಸದಸ್ಯರಾದ ವಿಶಾಲ ನವರಂಗ ಅವರುಗಳು ಆಗಮಿಸಲಿದ್ದಾರೆ.

ಸಪ್ಟಂಬರ್ 2ರಂದು ಉತ್ತರಾಧನೆ ನಿಮಿತ್ಯ ಕೂಡ ದೈನಂದಿನ ಭಕ್ತಿಪೂರ್ವ ಕಾರ್ಯಕ್ರಮಗಳು ನಡೆಯಲಿದ್ದು, ಡಾ. ಪಂಡಿತ ಶ್ರೀನಿವಾಸಾಚಾರ್ಯ ಪದಕಿ ಅವರಿಂದ ಪ್ರವಚನ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಜಿಲ್ಲಾಧ್ಯಕ್ಷರಾದ ರವಿ ಲಾತೂರಕರ್, ಸಮಾಜ ಸೇವಕರಾದ ವೆಂಕಟೇಶ ಅಡಕಿ ಅವರುಗಳು ಆಗಮಿಸಲಿದ್ದಾರೆ ಎಂದು ಶ್ರೀ ಗುರುರಾಜ ಸೇವಾ ಸಮಿತಿಯು ತಿಳಿಸಿದ್ದು, ಭಕ್ತಾದಿಗಳು ಈ ಮೂರು ದಿನಗಳ ಕಾಲ ನಡೆಯುವ ಧಾರ್ಮಿಕ ಭಕ್ತಿ ಕಾರ್ಯಕ್ರಮಗಳಿಗೆ ಆಗಮಿಸಿ, ಶ್ರೀ ಗುರುರಾಯರ ಸೇವೆ ಮಾಡಿ ಪುನೀತರಾಗಬೇಕೆಂದು ಕೋರಿದ್ದಾರೆ.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420