ಬಿಸಿ ಬಿಸಿ ಸುದ್ದಿ

ಸೇಡಂನಲ್ಲಿ ವಂದೇ ಭಾರತ ರೈಲು ನಿಲುಗಡೆಗೆ ಸಂಸದ ಜಾಧವ್ ಮನವಿ

ಕಲಬುರಗಿ: ಹೈದರಾಬಾದ ಬೆಂಗಳೂರು ವಂದೇ ಭಾರತ್ ರೈಲುನ್ನು ಜಿಲ್ಲೆಯ ವಾಣಿಜ್ಯ ಪಟ್ಟಣವೆಂದೆ ಕರೆಯಲ್ಪಡುವ ಸೇಡಂನಲ್ಲಿ ನಿಲುಗಡೆ ಮಾಡಬೇಕೆಂದು ಸಂಸದ ಡಾ.ಉಮೇಶ ಜಾಧವ್ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಮನವಿ ಮಾಡಿದರು.

ಸೋಮವಾರ ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿದ ಸಂಸದರು, ಸೇಡಂ ರೈಲು ನಿಲ್ದಾಣವು ಕಲಬುರಗಿ ಜಿಲ್ಲೆಯ ಆಯಕಟ್ಟಿನ ಸ್ಥಳದಿಂದಾಗಿ ನಿರ್ಧಿಷ್ಟ ಪ್ರಾಮುಖ್ಯತೆಯನ್ನು ಹೊಂದಿದೆ. ಇದು ವಲಯ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ ಮನವಿಯಲ್ಲಿ ಹೇಳಿದ್ದಾರೆ.

ಸೇಡಂ ನಿಲ್ದಾಣದಲ್ಲಿ ಹೈದರಾಬಾದ ಬೆಂಗಳೂರು “ವಂದೆ ಭಾರತ” ರೈಲು ನಿಲಗಡೆಯ ಪರಿಚಯವು ನಮ್ಮ ಜಿಲ್ಲೆಯ ನಾಗರಿಕರಿಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಹಲವಾರು ಪ್ರಯೋಜನ ನೀಡುತ್ತದೆ. ಈ ಸೌಲಭ್ಯವು ನಮ್ಮ ಮತದಾರ ಪ್ರಯಾಣದ ಹೊರೆಯನ್ನು ಕಡಿಮೆ ಮಾಡುವುದಲ್ಲದೆ, ಹೈದರಾಬಾದ ಮತ್ತು ಬೆಂಗಳೂರು ನಡುವೆ ಪ್ರಯಾಣಿಸುವವರಿಗೆ ಸುಗಮ, ಹೆಚ್ಚು ಪರಿಣಾಮಕಾರಿ ಪ್ರಯಾಣವನ್ನು ಸೃಷ್ಟಿಸುತ್ತದೆ ಎಂದು ಸಂಸದರು ರೈಲ್ವೆ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ವಿವರಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಜನರು ಆರ್ಥಿಕ ಮತ್ತು ಸಾಮಾಜಿಕ ಹಿತಾಸಕ್ತಿಗಳೊಂದಿಗೆ ಅಭಿವೃದ್ಧಿ ಹೊಂದುತ್ತಿರುವ ಜನಸಂಖ್ಯೆಯುಳ್ಳದಾಗಿದೆ.

ಶಿಕ್ಷಣ, ವ್ಯಾಪಾರ, ವ್ಯೆದ್ಯಕೀಯ ಸೇವೆಗಳಿಗಾಗಿ ಮತ್ತು ವಿವಿಧ ಉದ್ದೇಶಗಳಿಗಾಗಿಯೂ ಬೆಂಗಳೂರಿಗೆ ಪ್ರಯಾಣಿಸುತ್ತಾರೆ, ಆ ಕಾರಣಕ್ಕಾಗಿ ಈಗಿರುವ ಸೌಲಭ್ಯಗಳಿಂದ ತಡವಾಗಿ ಮುಟ್ಟುತ್ತಿರುವುದರಿಂದ ಹೈದರಾಬಾದ ಬೆಂಗಳೂರು “ವಂದೆ ಭಾರತ” ರೈಲು ಸೇಡಂನಲ್ಲಿ ನಿಲುಗಡೆ ಅವಕಾಶ ನೀಡಬೇಕೆಂದು ಸಂಸದ ಡಾ.ಉಮೇಶ ಜಾಧವ್ ಅವರು ಸಚಿವರಿಗೆ ಮನವಿ ಮಾಡಿದ್ದಾರೆ. ಸಂಸದ ಮನವಿಗೆ ಸ್ಪಂಧಿಸಿದ ಸಚಿವ ಆಶ್ವಿನ್ ವೈಷ್ಣವ್ ಅವರು ಅಗತ್ಯ ಕ್ರಮದ ಭರವಸೆ ನೀಡಿದ್ದಾರೆಂದು ಸಂಸದರು ಹೇಳಿದ್ದಾರೆ.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

22 mins ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

2 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

15 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

15 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

17 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

17 hours ago