ಶಹಾಬಾದ: ಧ್ಯಾನ್ಚಂದ್ ಅಪ್ಪಟ ದೇಶಭಕ್ತ, ಅಪ್ರತಿಮ ಹಾಕಿ ಆಟಗಾರ, ಸ್ವಾತಂತ್ರ್ಯ ಬರುವುದಕ್ಕಿಂತ ಮುಂಚೆಯೇ ಭಾರತಕ್ಕೆ ಒಲಿಂಪಿಕ್ಸ್ನಲ್ಲಿ ಮೂರು ಬಾರಿ ಅಂದರೆ ಹ್ಯಾಟ್ರಿಕ್ ಮೆಡಲ್ಗಳನ್ನು ತಂದು ಕೊಟ್ಟ ದೇಶ ಹೆಮ್ಮೆಯ ಪುತ್ರ ಎಂದು ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ದೈಹಿಕ ಶಿಕ್ಷಕ ಚನ್ನಬಸಪ್ಪ ಕೊಲ್ಲೂರ್ ಹೇಳಿದರು.
ಅವರು ಸೋಮವಾರ ನಗರದ ಎಸ್.ಎಸ್.ನಂದಿ ಪ್ರೌಢಶಾಲೆ ಹಾಗೂ ಎಸ್.ಜಿ.ವಿ ಹಿಂದಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೇಜರ್ ಧ್ಯಾನ್ಚಂದ್ರ ಜನ್ಮದಿನವಾದ ಆಗಸ್ಟ್ 29ನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದೆವೆ. ಕ್ರೀಡೆಗಳಲ್ಲಿ ಅತಿ ಹೆಚ್ಚಿನ ಆಸಕ್ತಿ ತೋರುತ್ತಿದ್ದ ಧ್ಯಾನ್ಚಂದ್, ಕುಸ್ತಿಯಲ್ಲಿ ಯಾವಾಗಲೂ ಮಗ್ನರಾಗುತ್ತಿದ್ದರು.ಆದರೆ ಅವರನ್ನು ಪ್ರಸಿದ್ಧ ಕ್ರೀಡಾಪಟು ಅಂತ ಮಾಡಿದ್ದು ನಮ್ಮ ರಾಷ್ಟ್ರೀಯ ಕ್ರೀಡೆ ಹಾಕಿ.
ಜರ್ಮನಿಯ ಬರ್ಲಿನ್ನಲ್ಲಿ ಭಾರತ ಹಾಗೂ ಜರ್ಮನಿಯ ನಡುವೆ ನಡೆದ ಹಣಾಹಣಿಯಲ್ಲಿ ಭಾರತ 8-1 ಅಂತರದಿಂದ ಗೆದ್ದು ಚಿನ್ನದ ಪದಕ ಗೆದ್ದು, ಅದರಲ್ಲಿ 6 ಗೋಲುಗಳು ಧ್ಯಾನ್ಚಂದ್ ಅವರದಾಗಿತ್ತು.ಇವರ ಆಟದ ವೈಖರಿ, ಶೈಲಿಯನ್ನು ಕಂಡ ಹಿಟ್ಲರ್ ಅವರನ್ನು ಕರೆಯಿಸಿ ನೀವು ಜರ್ಮನಿಗೆ ಬಂದು ಬಿಡಿ ನಿಮ್ಮನ್ನು ನಮ್ಮ ಸೇನೆಯ ಸರ್ವೋಚ್ಚ ನಾಯಕ ಮಾಡುತ್ತೆನೆ ಎಂದು ಹೇಳಿದಾಗ ಭಾರತ ನನ್ನ ದೇಶ,ಅಲ್ಲಿ ನಾನು ಚೆನ್ನಾಗಿದ್ದೆನೆ ಎಂದು ಅಪ್ಪಟ ದೇಶಪ್ರೇಮಿಯಾಗಿ ಹೊರಹೊಮ್ಮಿದ ಅಪ್ರತಿಮ ಆಟಗಾರ ಮೇಜರ್ ಧ್ಯಾನ್ಚಂದ್ ಎಂದು ಹೇಳಿದರು.
ಎಸ್.ಜಿ.ವಿ ಹಿಂದಿ ಪ್ರೌಢಶಾಲೆಯ ಮುಖ್ಯಗುರು ಮಲ್ಲಿನಾಥ ಪಾಟೀಲ, ಎಸ್.ಎಸ್.ನಂದಿ ಪ್ರೌಢಶಾಲೆಯ ಮುಖ್ಯಗುರುಗಳಾದ ಸುಧೀರ ಕುಲಕರ್ಣಿ, ಶಿಕ್ಷಕರಾದ ಬಾಬಾಸಾಹೇಬ ಸಾಳುಂಕೆ, ಮಹೇಶ್ವರಿ ಗುಳಿಗಿ, ಗೀತಾ ಸಿಪ್ಪಿ, ವಿಜಯಲಕ್ಷ್ಮಿ ವೆಂಕಟೇಶ, ರಂಜಿತಾ ಹಿರೇಮಠ, ಭಾರತಿ ಶ್ರೀರಾಮ ಚವ್ಹಾಣ, ಲತಾ ಸಾಳುಂಕೆ,ರಮೇಶ ಜೋಗದನಕರ್,ಭಾರತಿ ಸಾಲೋಮನ, ಭಾರತಿ ಸಾಲೋಮನ್ ಸೇರಿದಂತೆ ಶಾಲಾ ಮಕ್ಕಳು ಇದ್ದರು.ಮೇಲಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…