ಸಂವಿಧಾನ ಉಲ್ಲಂಘನೆ ಮಾಡಿದವರಿಗೆ ಜೈಲೂಟ ಗ್ಯಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ

0
42

ಕಲಬುರಗಿ: ಪ್ರಿಯಾಂಕ್ ಖರ್ಗೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ಬಿಜೆಪಿ ಹೇಳಿಕೆ ವಿಚಾರ ಕುರಿತು ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಚಿತ್ತಾಪುರದಲ್ಲಿ ಅಷ್ಟೇ ಅಲ್ಲ ರಾಜ್ಯದಲ್ಲಿಯೂ ಬೆಳೆಯಬಾರದು ಎಂದು ಕಿಡಿಕಾರಿದ್ದಾರೆ.

ಕಲಬುರಗಿ ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದ ಅವರು ಶಾಸಕ ಎನ್. ರವಿಕುಮಾರ್ ಅವರು ಜೇವರ್ಗಿಯಲ್ಲಿ ತಮ್ಮಪಕ್ಷದ ಟಿಕೆಟ್ ಮಾರಿಕೊಂಡಿದ್ದಾರೆ ಎಂದು ಸ್ವತಃ ಅವರ ಪಕ್ಷದವರೇ ಹೇಳುತ್ತಿದ್ದರು. ಅದಾದ ಮೇಲೆ ಅವರು ಕಲಬುರಗಿ ಗೆ ಬಂದೇ ಇರಲಿಲ್ಲ. ಆದರೆ ನಿನ್ನೆ ಚಿತ್ತಾಪುರಕ್ಕೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅವರ ಶಿಷ್ಯನಿಗೆ ಗಡಿಪಾರು ಶಿಕ್ಷೆ ವಿಧಿಸಿದಾಗ ರವಿಕುಮಾರ ಯಾಕೆ ಬಂದು ಪ್ರತಿಭಟನೆ ಮಾಡಲಿಲ್ಲ.? ” ಇದು ಬಿಜೆಪಿ ಸರಕಾರದ ಕಲಬುರಗಿ ಅಲ್ಲ, ಕಾಂಗ್ರೆಸ್ ಸರಕಾರದ ಕಲಬುರಗಿ.

Contact Your\'s Advertisement; 9902492681

ನಿಮ್ಮ ಶಿಷ್ಯ ಅಷ್ಟೇ ಅಲ್ಲ, ನೀವು ತಪ್ಪು ಮಾಡಿದರೂ ಕೂಡಾ ನಿಮ್ಮ ಮೇಲೂ ಕಾನೂನು ಕ್ರಮ ಆಗುತ್ತದೆ ” ಎಂದು ಎಚ್ಚರಿಸಿದರು.
ಆಂದೋಲಾ ಸಿದ್ದಲಿಂಗ ಸ್ವಾಮೀಜಿ ವಿರುದ್ದ ಹರಿಹಾಯ್ದ ಸಚಿವರು, ” ನಿಮ್ಮದು ಎಂತಹ ತತ್ವ ? ಅಕ್ಕಿ ಕಳ್ಳರಿಗೆ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಮಾಡುವವರ ರಕ್ಷಣೆ ಮಾಡಿ ಅಂತ ನಿಮ್ಮ ತತ್ವ ಹೇಳುತ್ತಾ” ? ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ಇದ್ದಾಗ ಅಕ್ಕಿ ಹಾಗೂ ಹಾಲಿನಪುಡಿ ಕಳ್ಳತನ ಮಾಡಿರುವ ಆರೋಪ ಹೊತ್ತಿರುವವರಿಗೆ ಟಿಕೇಟ್ ನೀಡಲಾಗಿತ್ತು. ಆದರೆ,ನಮ್ಮ ಸರ್ಕಾರ ಬಂದ ಮೇಲೆ ಅಂತವರನ್ನ ಜೈಲಿಗೆ ಕಳಿಸಲಾಗಿದೆ ಅಥವಾ ಅಂತವರು ಬೇಲ್ ಮೇಲೆ ಹೊರಗಡೆ ಇದ್ದಾರೆ ಎಂದು ಖರ್ಗೆ ಟೀಕಿಸಿದರು.

ಬಿಜೆಪಿಯವರಿಗೆ ಬಹುಶಃ ಏನು ಮಾಡಬೇಕು ಎನ್ನುವುದೇ ಅರ್ಥ ಆಗುತ್ತಿಲ್ಲ. ಅವರು ಅಧಿಕಾರ ಕಳೆದುಕೊಂಡು ನೂರು ದಿನ ಆಗಿದೆ. ಆದರೆ, ನಾವು ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದೇವೆ. ಚಂದ್ರಯಾನ ಚಂದ್ರನಿಗೆ ಮುಟ್ಟಿದೆ. ಆದರೆ ವಿರೋಧ ಪಕ್ಷದ ನಾಯಕ ಯಾರು ಎಂದು ಅದು ಬಿಜೆಪಿಗರಿಗೆ ಗೊತ್ತಾಗುತ್ತಿಲ್ಲ. ಅವರ ಪಕ್ಷದಲ್ಲಿ ಏನು ಆಗುತ್ತಿದೆ ಎಂದು ಅವರಿಗೆ ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಆಡಳಿತ ಕೊಡಬೇಕು ಎನ್ನುವ ಉದ್ದೇಶದಿಂದ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾರವನ್ನು ಟೀಕಿಸುವ ನೈತಿಕತೆ ಬಿಜೆಪಿ ನಾಯಕರಿಗೆ ಇಲ್ಲ ಎಂದ ಸಚಿವರು ಬಿಜೆಪಿಯವರು ಹತಾಶರಾಗಿದ್ದಾರೆ. ಅಧಿಕಾರ ಇಲ್ಲದೇ ಇರುವುದಕ್ಕೆ ನೀರಿನಿಂದ ಹೊರಬಿದ್ದ ಮೀನಿನಂತೆ ಬಿಜೆಪಿಯವರು ಚಡಪಡಿಸುತ್ತಿದ್ದಾರೆ. ಮೊನ್ನೆ ಮೋದಿ ಬೆಂಗಳೂರಿಗೆ ಬಂದಾಗ ಬಿಜೆಪಿ ನಾಯಕರು ಬ್ಯಾರಿಕೇಡ್ ಹಿಂದೆ ಬಂಧಿ ಆಗಿ ಕನ್ನಡಿಗರ ಮಾರ್ಯಾದೆ ಬೀದಿಗೆ ತಂದಿದ್ದರು ಎಂದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿಎಂ ಇದ್ದಾಗ ಏನೇ ಹೇಳಿದರು ದಾಖಲೆ ಕೊಡಿ ಎನ್ನುತ್ತಿದ್ದರು. ಈಗ ಬೊಮ್ಮಾಯಿ ಅವರು ಮಾಡುತ್ತಿರುವ ಆರೋಪಕ್ಕೆ ಯಾವ ದಾಖಲೆಗಳಿವೆ. ? ಅವರು ಹತಾಶೆರಾಗಿ ಆರೋಪ ಮಾಡುತ್ತಿದ್ದಾರೆ. ಹಾಗೆ ಆರೋಪ ಮಾಡುವುದರಿಂದ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬಹುದು ಎಂದು ಭಾವಿಸಿದಂತಿದೆ ಎಂದು ಕುಟುಕಿದರು.
ಗುತ್ತಿಗೆದಾರರ ಸಂಘದ ಅಧ್ಯಕ್ಷರು ನಮ್ಮ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿಲ್ಲ. ಬಿಲ್ ಪಾವತಿಗೆ ವಿಳಂಬವಾಗುತ್ತಿದೆ ಎಂದಿದ್ದಾರೆ. ಥರ್ಡ್ ಪಾರ್ಟಿ ಪರಿಶೀಲನೆ ವರದಿ ನಂತರ ಬಾಕಿ ಇರುವ ಬಿಲ್ ಗಳನ್ನು ಪಾವತಿ ಮಾಡುತ್ತೇವೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here