ಕಲಬುರಗಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ ನೇರ ಸ್ಪರ್ಧೆಯಲ್ಲಿ ಕಲಬುರಗಿ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶರಣಬಸವೇಶ್ವರ ಶಾಲೆಯ ವಿದ್ಯಾರ್ಥಿ ಕು. ಪಂಕಜಕುಮಾರ ರಾಣಪ್ಪ ಸಂಗನ ರಾಜ್ಯ ಮಟಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾಗಿದ್ದ ಪ್ರಯುಕ್ತ ಕರಾಟೆ ಶಿಕ್ಷಕರಾದ ಶೈಲೇಶಕುಮಾರ ಹಾಗರಗಿ, ಅಖಿಲ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಶಿವಶರಣಪ್ಪ ಬೊಮ್ಮ, ದೈಹಿಕ ಶಿಕ್ಷಣ ಶಿಕ್ಷಕ ಶಿವಶರಣಪ್ಪ ಮಂಟಾಳೆ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ದೊಡ್ಡಮನಿ, ಭಾರತ ಸ್ಕೌಟ್ ಮತ್ತು ಜಿಲ್ಲಾ ತರಬೇತಿ ಆಯುಕ್ತರಾದ ಅಮರೇಶ್ ಕೋರಿ, ಜಯಪ್ರಕಾಶ್ ಕಟ್ಟಿಮನಿ, ಜಿಲ್ಲಾ ಕಾರ್ಯದರ್ಶಿಗಳಾದ ಭೋಜನಗೌಡ, ಪೀರಪ್ಪ ಹೋಗೊಂಡ, ದಸರತ್, ಜಿಲ್ಲಾ ದೈಹಿಕ ಶಿಕ್ಷಣ ಅಧ್ಯಕ್ಷ ಎಂ ಜಿ ಬಿರಾದಾರ್, ಶಿವಪುತ್ರ ಅಸ್ತಿಗಿ, ಕಲಬುರಗಿ ದಕ್ಷಿಣ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪುತ್ರಪ್ಪ ಹೂಗಾರ್, ಕೃಷ್ಣ ಗೌಳಿ, ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಚೌವ್ಹಾಣ ಇವರು ಹರ್ಷ ವ್ಯಕ್ತಪಡಿಸಿರುತ್ತಾರೆ.