ಬಿಸಿ ಬಿಸಿ ಸುದ್ದಿ

ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರು ಶ್ರೇಷ್ಠ

ಚಿತ್ತಾಪುರ; ಕನ್ನಡಿಗರು ಸ್ವಾಭಿಮಾನಿಗಳಾಗಿ ಜೀವನ ನಡೆಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ನಾಡಿನ ನಾಯಕರ ಪಾತ್ರ ಶ್ರೇಷ್ಠವಾಗಿದೆ ಎಂದು ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯುನ್ಮಾನ ಮತ್ತು ಉಪಕರಣ ವಿಭಾಗ ಮುಖ್ಯಸ್ಥ ಪೆÇ್ರ. ಸಂಜಯ ಮಾಕಲ್ ಹೇಳಿದರು.

ಪಟ್ಟಣದ ಶ್ರೀಮತಿ ಮಹಾದೇವಮ್ಮ ಬಿ ಪಾಟೀಲ್ ಕಾಲೇಜಿನ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕವತಿಯಿಂದ ಶನಿವಾರ ಹಮ್ಮಿಕೊಂಡಿರುವ ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಕಸಾಪ ಅಜೀವ ಸದಸ್ಯರಿಗೆ ಸನ್ಮಾನ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಕನ್ನಡ ನಾಡಿನ ಅನೇಕ ಹೋರಾಟಗಾರರು ಬ್ರಿಟಿಷ್‍ರ ವಿರುದ್ದ ಹೋರಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಕೊಟ್ಟಿದ್ದಾರೆ ಎಂದರು.

ಸಂಗೋಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪುಸುಲ್ತಾನ್, ರಾಜಾ ವೆಂಕಟಪ್ಪ ನಾಯಕ, ಮೈಲಾರ ಮಹಾದೇವಪ್ಪನಂತಹ ದೇಶ ಪ್ರೇಮ ಮೆಚ್ಚುವಂತಹದ್ದು. ಕೆಲವರು ಸೋತರು ಶರಣಾಗಲಿಲ್ಲ. ಮಹಾದೇವಪ್ಪ ರಾಂಪುರೆ, ಕಮಲಾದೇವಿ, ಹರ್ಡೇಕರ್ ಮಂಜಪ್ಪ ಇವರು ಕರ್ನಾಟಕದ ಗಾಂಧಿಗಳು ಎಂದು ಬಣ್ಣಿಸಿದರು.

ಕನ್ನಡಿಗರು ನಿರಾಭಿಮಾನಿಗಳಾಗದೇ ಸ್ವಾಭಿಮಾನಿಗಳಾಗಬೇಕು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರನ್ನು ಬಡಿದೆಬ್ಬಿಸುವ ಎಚ್ಚರಿಸುವ ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ಕನ್ನಡಿಗರು ಕನ್ನಡ ನಾಡಿನ ಇತಿಹಾಸವನ್ನು ತಿಳಿದುಕೊಳ್ಳಬೇಕು. ಕನ್ನಡದ ಪುಸ್ತಕಗಳು ಹೆಚ್ಚು ಹೆಚ್ಚು ಓದಬೇಕು. ಜನರ ಮಧ್ಯದಲ್ಲಿ ಕನ್ನಡ ಬಿತ್ತುವ ಕೆಲಸ ಕಸಾಪ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.

ವಿಶ್ವ ಗುರು ಶಿಕ್ಷಣ ಸಂಸ್ಥೆ ಅಧ್ಯಕ್ಷ ನಾಗರೆಡ್ಡಿ ಪಾಟೀಲ್ ಕರದಾಳ ಮಾತನಾಡಿ, ತಾಲೂಕು ಮಟ್ಟಕ್ಕೆ ಸೀಮಿತ ವಾಗದೇ ಗ್ರಾಮೀಣ ಮಟ್ಟದಲ್ಲಿ ಸಾಹಿತ್ಯ ಚಟುವಟಿಕೆಗಳು ನಡೆಯಬೇಕು. ಗ್ರಾಮೀಣ ಮಟ್ಟದಲ್ಲಿ ಸಾಹಿತ್ಯ ಪ್ರತಿಭೆಗಳು ಹೆಚ್ಚು ಇವೆ. ಅಂತಹವರ ಪ್ರತಿಭೆಗಳು ಹೊರತರಲು ಪ್ರಯತ್ನಿಸಬೇಕೆಂದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ್ ಅಂಡಗಿ, ತಾಲೂಕು ಕಸಾಪ ಗೌರವ ಸಲಹೆಗಾರ ನಾಗರಾಜ ಭಂಕಲಗಿ ಮಾತನಾಡಿದರು.
ಕಸಾಪ ತಾಲೂಕು ಅಧ್ಯಕ್ಷ ವೀರೇಂದ್ರಕುಮಾರ ಕೊಲ್ಲೂರ ಅಧ್ಯಕ್ಷತೆವಹಿಸಿ ಮಾತನಾಡಿದರು.

ಪ್ರಾಚಾರ್ಯ ಸೋಮಶೇಖರ ಕಲಶೆಟ್ಟಿ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ವಿನೋದಕುಮಾರ ಜನೆವರಿ, ರಾಜೇಂದ್ರ ಮಾಡಬೂಳ, ಸಿದ್ದಲಿಂಗ ಬಾಳಿ, ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜಗದೇವ ದಿಗ್ಗಾಂವಕರ್, ವೆಂಕಟೇಶ ಬಳಿಚಕ್ರ, ರಮೇಶ ಬಟಗೇರಿ, ಸ್ವರ್ಣಲತಾರೆಡ್ಡಿ ದುಗನೂರ, ಮಹ್ಮದ್ ಇಬ್ರಾಹಿಮ, ಚಂದ್ರಶೇಖರ ಊಟಗೂರ, ಬಸಪ್ಪ ಯಂಬತ್ತನಾಳ, ನರಸಿಂಹ ಆಲಮೇಲಕರ್, ಶಾಂತಕುಮಾರ ಮಳಖೇಡ, ಆನಂದ ಪಾಟೀಲ್ ನರಬೋಳ್, ಲಿಂಗಪ್ಪ ಮಲ್ಕನ್, ನಿಂಗಪ್ಪ ಗೋಡೆಕರ್, ಸಿದ್ದಲಿಂಗಯ್ಯಸ್ವಾಮಿ ಕೋಡಗಿಮಠ, ಅಂಬರೀಷ್ ಸುಲೇಗಾಂವ, ವಿನೋದ ಬನಸೋಡೆ ಸೇರಿದಂತೆ ಇನ್ನಿತರಿದ್ದರು.

ಕಸಾಪ ತಾಲೂಕು ಮಹಿಳಾ ಪ್ರತಿನಿಧಿ ಪೂಜಾ ಭಂಕಲಗಿ ಪ್ರಾಸ್ತಾವಿಕ ಮಾತನಾಡಿದರು. ಪದವಿ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಶಾಂತಿಪ್ರೀಯಾ ಸ್ವಾಗತಿಸಿದರು.

ಪಾವನಿ, ಮರಿಯಂ ನಿರೂಪಣೆ ಮಾಡಿದರು. ಅಂಬರೀಶ ವಂದಿಸಿದರು.

emedialine

Recent Posts

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

2 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

2 hours ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

4 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

4 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

6 hours ago