ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ್ ಬಡಾವಣೆಗೆ ಇಂದಿನಿಂದ ಹೊಸ ಸಿಟಿ ಬಸ್ ಸಂಚಾರಕ್ಕೆ ಡಿ.ಟಿ.ಓ ಈಶ್ವರ ಹೊಸಮನಿ ಹಾಗೂ ಬಡಾವಣೆಯ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಸ್ ಚಾಲಕ ಅಂಭಾದಾಸ್ ಹಾಗೂ ನಿರ್ವಾಹಕ ಸೈಯದ್ ಹುಸೇನಿ ಅವರಿಗೆ ಬಡಾವಣೆಯ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಡಾವಣೆಯ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ಸಿಟಿ ಬಸ್ ಸಂಚಾರದ ಸೌಲಭ್ಯ ಒದಗಿಸಿಕೊಟ್ಟಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಅವರಗೆ ವಿಶೇಷ ಧನ್ಯವಾದಗಳನ್ನು ಸಲ್ಲಿಸಿದರು. ಬಡಾವಣೆಯ ಎಲ್ಲಾ ನಿವಾಸಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಿಟಿ ಬಸ್ ಕೇಂದ್ರ ಬಸ್ ನಿಲ್ದಾಣದಿಂದ, ಕೆ.ಹೆಚ್.ಬಿ ಗ್ರೀನ್ ಪಾರ್ಕ, ರುಕ್ಮುದ್ದೀನ್ ತೋಲಾ, ಸುಪರ್ ಮಾರ್ಕೆಟ್ ಮಾರ್ಗವಾಗಿ ದಿನನಿತ್ಯ ಸಂಚರಿಸುತ್ತದೆ.
ಈ ಸಂದರ್ಭದಲ್ಲಿ ಎ.ಟಿ.ಐ ಅಣ್ಣಾರಾವ ನಾಯಕ, ದೇವರಾಜ, ಚಾರ್ಜಮ್ಯಾನ್ ನಾಗೇಂದ್ರಪ್ಪ, ಕ್ಷೇಮಾಭಿವೃದ್ಧಿ ಸಂಘದ ಸರ್ವ ಪಧಾದಿಕಾರಿಗಳು ಹಾಗೂ ಬಡಾವಣೆಯ ಎಲ್ಲಾ ನಿವಾಸಿಗಳು ಭಾಗವಹಿಸಿದ್ದರು.