ಆಳಂದ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಭಾಸಗಿ ಹೇಳಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಸಿ.ಪಿ. ಎಸ್ ಶಾಲೆ ಆವರಣದಲ್ಲಿ ಶನಿವಾರ ನಡೆದ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಆಳಂದ ಉತ್ತರ ವಲಯದ
2023-24ನೇ ಸಾಲಿನ ಕ್ಲಸ್ಟರ್ ಮಟ್ಟದ
ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನೋಡಲ್ ಅಧಿಕಾರಿ ಪ್ರಕಾಶ ಕೋಟರೆ ಮಾತನಾಡಿದರು.ಪ್ರೌಢಶಾಲೆ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಖಜೂರಿ,ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಣಪ್ಪ ಸಂಗನ,ನಾಗನಾಥ ಅಲಮದ್ , ಕವಿತಾ ಪಾಟೀಲ,ಶಿವರಾಜ ಖಂಡಾಳ,ಪ್ರಕಾಶ ಕಿಣಗಿ,ಸೇರಿದಂತೆ ವಿವಿಧ ಶಾಲೆಯಮು ಖ್ಯಗುರು,ಶಿಕ್ಷಕರು, ವಿದ್ಯಾರ್ಥಿಗಳು,ಪಾಲಕರು ಪಾಲ್ಗೊಂಡಿದ್ದರು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸ್ಪರ್ಧೆಗಳು ಜರುಗಿದವು.ದಕ್ಷಿಣ ವಲಯ ಸಿ.ಆರ್.ಪಿ.ದತ್ತಪ್ಪ ಸುಳ್ಳನ ಪ್ರಾಸ್ತಾವಿಕ ಮಾತನಾಡಿದರು.ಶಿಕ್ಷಕ ಅಂಬಾರಾಯ ಕಾಂಬಳೆ ಸ್ವಾಗತಿಸಿದರು. ಅರವಿಂದ ಶಹಾಪುರ ನಿರೂಪಿದರು.ಸಂತೋಷ ಕವಲಗಾ ವಂದಿಸಿದರು
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…