ಕಲಬುರಗಿ: ಒಬ್ಬ ವ್ಯಕ್ತಿಯ ಜೀವನದ ದಿಕ್ಕನ್ನೇ ಬದಲಿಸುವ ಶಕ್ತಿ ಪುಸ್ತಕಗಳಿಗಿವೆ. ಇವುಗಳು ಸಾಧನೆಯ ದಾರಿಯನ್ನು ತಿಳಿಸುವ ಮೂಲಕ ಶ್ರೇಷ್ಠ ವ್ಯಕ್ತಿತ್ವ ನಿರ್ಮಾಣ ಮಾಡುವ ಸಾಧನಗಳಾಗಿವೆ. ಆದ್ದರಿಂದ ಅನೇಕ ಚಟಗಳನ್ನು ರೂಢಿಸಿಕೊಂಡು ಹಾಳಾಗುವ ಬದಲು, ಉತ್ತಮವಾದ ಪುಸ್ತಕಗಳನ್ನು ನಿರಂತರವಾಗಿ ಓದುವ ಹವ್ಯಾಸವನ್ನು ಅಳವಡಿಸಿಕೊಂಡರೆ ಬದುಕು ಸುಂದರವಾಗುತ್ತದೆ ಎಂದು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು.
ನಗರದ ಜಗತ್ ಬಡಾವಣೆಯಲ್ಲಿರುವ ‘ಶ್ರೀ ಮೈಲಾರಲಿಂಗೇಶ್ವರ ಪ್ರಾಥಮಿಕ ಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ ಮತ್ತು ‘ಜಿಲ್ಲಾ ಯುವ ಸಂಘಗಳ ಒಕ್ಕೂಟ’ದ ವತಿಯಿಂದ ಬುಧವಾರ ಜರುಗಿದ ‘ರಾಷ್ಟ್ರೀಯ ಪುಸ್ತಕ ಓದು ದಿನಾಚರಣೆ’ಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಹನೀಯರ ಪುಸ್ತಕಗಳನ್ನು ಉಚಿತವಾಗಿ ವತರಣೆ ಮಾಡಿ ಮಾತನಾಡಿದರು.
ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಇದು ಯಾರಿಂದಲೂ ಕಳ್ಳತನ ಮಾಡಲಾಗದ ಸಂಪತ್ತಾಗಿದೆ. ಇಂತಹ ಅಮೂಲ್ಯವಾದ ಸಂಪತ್ತನ್ನು ಪ್ರತಿಯೊಬ್ಬರು ಪಡೆಯಬೇಕಾದರೆ ಸದಾ ಪುಸ್ತಕಗಳನ್ನು ಓದಬೇಕು. ವಿದ್ಯಾರ್ಥಿ ದೆಸೆಯಿಂದಲೇ ಶ್ರೇಷ್ಠ ಪುಸ್ತಕಗಳನ್ನು ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು. ನಾವು ಹೆಚ್ಚು ಓದಿದಷ್ಟು ಅರಿವು ಮತ್ತು ಜ್ಞಾನದ ವ್ಯಾಪ್ತಿ ಹೆಚ್ಚಾಗಿ ವ್ಯಕ್ತಿ, ಶಕ್ತಿಯಾಗುತ್ತಾನೆ. ವಿಶೇಷವಾಗಿ ಯುವಕರು ಉತ್ತಮ ಗ್ರಂಥಗಳ ಅಧ್ಯಯನದತ್ತ ಚಿತ್ತಹರಿಸಬೇಕಾಗಿದೆ ಎಂದು ಒತ್ತಿ ಹೇಳಿದರು.
ಕಾರ್ಯಕ್ರಮದಲ್ಲಿ ಕಜಾಪ ಜಿಲ್ಲಾಧ್ಯಕ್ಷ, ಸಾಹಿತಿ ಎಂ.ಬಿ.ನಿಂಗಪ್ಪ, ನ್ಯಾಯವಾದಿ ಅನುರಾಧಾ ಕಟ್ಟಿಮನಿ, ಶಾಲೆಯ ಮುಖ್ಯ ಶಿಕ್ಷಕ ಎಸ್.ಎಸ್.ಹೂಗಾರ, ಶಿಕ್ಷಕರಾದ ಚಂದ್ರಕಲಾ ಮಾಸಿಮಠ, ಬಸಮ್ಮ ಬಿ.ಸಾತಿಹಾಳ್, ಶಂಭುಲಿಂಗ ದೊಡ್ಡಮನಿ, ಸಹಾಯಕಿ ವಿಜಯಲಕ್ಷ್ಮೀ ಗಾಂಗಜಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…