ಕಲಬುರಗಿ: ಮನೆಗೆ ಸೀಮಿತವಾಗಿದ್ದ ಅಷ್ಟಮಿಯನ್ನು ಸಾರ್ವತ್ರಿಕವಾಗಿ ಆಚರಿಸುವ ಮೂಲಕ ಸಹಬಾಳ್ವೆಗೆ ಅವಕಾಶ ಮಾಡಿಕೊಟ್ಟಿದೆ ಎಂದು ಸಂಪನ್ಮೂಲ ವ್ಯಕ್ತಿ ದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.
ಅವರು ಜೇವರ್ಗಿ ನಗರದ ಮಹಾಲಕ್ಷ್ಮೀ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಬಾಲ್ಯದಲ್ಲಿ ಮಕ್ಕಳಿಗೆ ಓದು ಬರಹ ಕಲಿಸುವುದರ ಜೊತೆಗೆ ಸಂಸ್ಕಾರದ ಶಿಕ್ಷಣವನ್ನು ನೀಡುವುದು ಅತ್ಯಗತ್ಯ. ಮಹಾಭಾರತದ ಯುದ್ದದಲ್ಲಿ ಅರ್ಜುನನ ಸಾರಥ್ಯ ವಹಿಸಿದ ಶ್ರೀಕೃಷ್ಣನು ಅಧರ್ಮವನ್ನು ತೊಲಗಿಸಿ ಧರ್ಮ ರಕ್ಷಣೆಗಾಗಿ ಹೋರಾಡಲು ಅರ್ಜುನನಿಗೆ ಉಪದೇಶಿಸುವ ಮೂಲಕ ಅಧರ್ಮದ ವಿರುದ್ಧ ಎಲ್ಲರೂ ಒಟ್ಟಾಗಿ ಹೊರಾಡಬೇಕು ಎಂದು ಜಗತ್ತಿಗೆ ಸಾರಿದ್ದಾನೆ.
ಆ ತತ್ವವನ್ನು ಜಿವನದಲ್ಲಿ ಅಳವಡಿಸಿಕೊಳ್ಳಬೇಕು. ಶ್ರೀಕೃಷ್ಣ ಜೀವನೂತ್ಸಾಹದ ಸಂಕೆತ. ಆತನ ಪ್ರಭುದ್ದತೆ, ಮುತ್ಸದಿತನ ಎಲ್ಲಾ ಕಾಲಗಟ್ಟಕ್ಕು ಮಾದರಿಯಾಗಿ ನಿಲ್ಲುತ್ತದೆ. ಭಗವಾನ ಶ್ರೀ ಕೃಷ್ಣನ ವ್ಯಕ್ತಿತ್ವ ಅದ್ಭುತವಾದದ್ದು. ಆತನ ಜೀವನದ ಪ್ರತಿ ಘಟನೆಯೂ ಅನುಸರಣೀಯವಾದದು. ಅದಕ್ಕಾಗಿಯೇ ಮಾನವನು ಸಾವಿರಾರು ವರ್ಷಗಳಿಂದ ಕೃಷ್ಣನ ನಡೆ-ನುಡಿಗಳನ್ನು ಅನುಸರಿಸುತ್ತಾ ಬಂದಿದ್ದಾನೆ. ಆತನ ಬಾಲ್ಯ ಲೀಲೆಗಳಿಂದ ಇಂದಿಗೂ ಸಹ ನಮ್ಮ ಜೀವನದ ಅನೇಕ ಸಮಸ್ಯೆಗಳಿಗೆ ಸಮಾಧಾನವನ್ನು ಸೂಚಿಸುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉತ್ತಮ ಶಿಕ್ಷಕಿಯರಾದ ಅಶ್ವಿನಿ, ಶಿವಾನಿ, ಭಾಗ್ಯಶ್ರೀ ವಾಯ್, ತಾಯಮ್ಮ, ಭಾಗ್ಯಶ್ರೀ ಪಾಟೀಲ್, ಶರಣಮ್ಮ, ಮೆಹಜಬಿನ್, ರೇಷ್ಮಾ, ರೇಣುಕಾ, ಶಿಕ್ಷಕರಾದ ಶರಣಗೌಡ, ಶಿವರಾಜ್, ಮಹಾಂತೇಶ ಸೇರಿ ಮುಂತಾದವರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…