ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಂಗವಿಕಲ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

0
275

ಕಲಬುರಗಿ: ಗೌರವಧನ ಆಧಾರದಲ್ಲಿ ಕಾರ್ಯಾನಿರ್ಹಿಸುತ್ತಿರುವ ಅಂಗವಿಕಲ ಸಿಬ್ಬಂದಿಗಳಿಗೆ ಕೆಲವರು ಪ್ರಭಾವ ಬಳಿಸಿಕೊಂಡು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಷ ಸೇವೆಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆಸಿದೆ.

ಅಫಜಲಪೂರ ತಾಲ್ಲೂಕಿನ ಉಡಚಣ ಗ್ರಾಮದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಣ್ಣವೀರಪ್ಪ ಗೌಡಗಾಂವ ಆತ್ಮಹತ್ಯೆಗೆ ಯತ್ನಿಸಿರುವ ಕಾರ್ಯಾಕರ್ತ. ಕೆಲವು ದಿನಗಳಿಂದ ನಿರಂತರವಾಗಿ ತನ್ನ ಗೌರವಧನದಲ್ಲಿ ಆಯ್ಕೆಗೊಂಡಿರುವ ಬಗ್ಗೆ ಅಸಮಧಾನಕ್ಕೆ ಒಳಗಾಗಿ ತನ್ನ ವಿರುದ್ಧ ನಿರಂತರ ಒಂದಲ್ಲ ಒಂದು ರೀತಿಯಲ್ಲಿ ಇಲಾಖೆಗೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಪೀಡುಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Contact Your\'s Advertisement; 9902492681

ಕುರುಕುಳ ನೀಡುತ್ತಿರುವ ವ್ಯಕ್ತಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗೆ ಭೇಟಿ ಮನವಿ ಸಲ್ಲಿಸಲು ತೆರಳುತ್ತಿದ ವೇಳೆ ಮಾನಸಿಕವಾಗಿ ಮನನೊಂದು ಜಿಲ್ಲಾಧಿಕಾರಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈ ವೇಳೆ ಸ್ಥಳೀಯ ಪೊಲೀಸರು ಧಾವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಣವೀರ್ ನನ್ನು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಕಿರುಕುಳ ನೀಡಿರುವ ವ್ಯಕ್ತಿಗಳ ವಿರುದ್ಧ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here