ಕಲಬುರಗಿ: ಕಮಲಾಪೂರ ತಾಲ್ಲೂಕಿನ ಗುರುದತ್ತ ಪೆಟ್ರೋಲ್ ಬಂಕ್ ಹತ್ತಿರ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಒರ್ವ ಬೈಕ್ ಸವಾರ ಮೃತಪಟ್ಟ ಹಾಗೂ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಿನ್ನೆ ಜರುಗಿದೆ.
ಶ್ರೀಕಾಂತ ಮಲ್ಲಪ್ಪ ವಗ್ಗೆ (26) ಮೃತಪಟ್ಟ ಬೈಕ್ ಸಾವಾರ, ವಗ್ಗೆ ಜಿಲ್ಲೆಯ ಜಿಂಗಟಾ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದ್ದು, ಕಲಬುರಗಿ ನಗರದ ಹರಿಜವಾಡ ಬಡಾವಣೆ ತಾಜೋದ್ದಿನ್ ಹಾಗೂ ಅವರ ಪತ್ನಿ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಗ್ಗೆ ಹಿಂದುಳಿದ ವರ್ಗಗಳ ಇಲಾಖೆಯ ಮಹಾಗಂವ ಕ್ರಾಸ್ ವಸತಿ ನಿಲಯದಲ್ಲಿ ಗುತ್ತಿಗೆಯಾಧರದಲ್ಲಿ ಕಾರ್ಯ ನಿರ್ವಹಿಸಿದ್ದು, ನಿನ್ನೆ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ವಗ್ಗೆ ಅವರು ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿದ್ದಾಗ ಎದುರಿಂದ ಬಂದ ಕಾರು ಡಿಕ್ಕಿ ಹೊಡೆದು ನಂತರ ತಾಜೋದ್ದಿನ್ ಅವರ ಹಿಂದೆ ಬರುತಿದ ಇವರ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಥಮ ಮಾಹಿತಿ ಎಂದ ತಿಳಿದುಬಂದಿದೆ.
ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತಿದ್ದಾರೆ.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…