ವಿದ್ಯುತ್ ಪರಿವರ್ತಕ ಅಳವಡಿಸಲು ಕರವೇ ಪ್ರತಿಭಟನೆ

0
11

ಸುರಪುರ: ತಾಲೂಕಿನ ಬಿಜಾಸಪುರ ಗ್ರಾಮದಲ್ಲಿ ಕಳೆದ ಅನೇಕ ದಿನಗಳಿಂದ ವಿದ್ಯುತ್ ಪರಿವರ್ತಕ ಸುಟ್ಟು ಹೋಗಿದ್ದು ಹೊಸ ಟಿ.ಸಿ ಕೂಡಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಶೆಟ್ಟಿ ಬಣದ ಮುಖಂಡರು ನಗರದ ಜೆಸ್ಕಾಂ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ನಿಂಗಪ್ಪ ನಾಯಕ ಮಾತನಾಡಿ,ಬಿಜಾಸಪುರ ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ ಸುಟ್ಟು ಅನೇಕ ದಿನಗಳಾದರು ಜೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ,ಇದರಿಂದ ಗ್ರಾಮದ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ನೂತನ ಟಿ.ಸಿ ಕೂಡಿಸಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

Contact Your\'s Advertisement; 9902492681

ನಂತರ ಎಇಇ ಅಶೋಕ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here