ಸೆ.17ರಂದು ಕಲಬುರಗಿಗೆ ಮುಖ್ಯಮಂತ್ರಿ; ಕಲಂ 371 ಜೆ ಜಾರಿ ದಶಮಾನೋತ್ಸವ

0
19

ಕಲಬುರಗಿ: 17ರಂದು ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಲ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.

ಕಲ್ಯಾಣ ಕರ್ನಾಟಕ ವಲಯದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ 2013ರಲ್ಲಿ ಸಂವಿಧಾನ ತಿದ್ದುಪಡಿ ಮೂಲಕ ಕಲಂ 371 ಜೆ ಜಾರಿಗೊಳಿಸಿದ ದಶಮಾನೋತ್ಸವ ನೆನಪು ಹಾಗೂ ಕಲ್ಯಾಣ ಕರ್ನಾಟಕ ವಿಮೋಚನ ದಿನದ ಅಂಗವಾಗಿ ಕಾರ್ಯಕ್ರಮ ಜರುಗಲಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಕುಮಾರ ಮೀನಾ ಸಭೆಯಲ್ಲಿ ಪಾಲ್ಗೊಂಡಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here