ಸಾರಿಗೆ ಬಸ್ ದ್ವಿ-ಚಕ್ರ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

0
29

ಕಲಬುರಗಿ: ಸಾರಿಗೆ ಬಸ್ ಮತ್ತು ದ್ವಿ-ಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಳಂದ ತಾಲ್ಲೂಕಿನ ಕಡಗಂಚಿ -ಲಾಡಚಿಂಚೋಳಿ ಮಧ್ಯೆ ನಡೆದಿದೆ.

ಲಾಡಮುಗಳಿ ಗ್ರಾಮದ ಶಶಿಕಾಂತ ಶ್ರೀಮಂತ ಕಟ್ಟಬೂರೆ (27), ಶಿವಕುಮಾರ ಅಂಬಣ್ಣ (25) ಮೃತ ಯುವಕರು. ಲಾಡಮುಗಳಿಯಿಂದ ಕೋರಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಅಲ್ಲಿಂದ ಲಾಡಚಿಂಚೋಳಿ ಮಾರ್ಗವಾಗಿ ಕಡಗಂಚಿಗೆ ಬರುತ್ತಿರುವಾಗ ಕಲಬುರಗಿಯಿಂದ ಆಳಂದಕ್ಕೆ ಬರುವ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ.

Contact Your\'s Advertisement; 9902492681

ಡಿವೈಎಸ್ಪಿ ಗೋಪಿ ಆರ್, ಸಿಪಿಐ ಭಾಸು ಚವ್ಹಾಣ್, ಪಿಎಸ್ಐ ಗಂಗಮ್ಮ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾ ನರೋಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here