ಕಲಬುರಗಿ; ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯಿರುವ ವಿದ್ಯಾನಗರ ಕಾಲೋನಿಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ತಿಂಗಳ ಪರ್ಯಂತ ನಡೆಸಿಕೊಂಡು ಬಂದಿರುವ ಯಾದಗಿರಿ ಜಿಲ್ಲೆಯ ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ದಸಂಸ್ಥಾನ ಮಠದ ಶ್ರೀ ವಿಶ್ವರಾಧ್ಯರ ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮ ಜರುಗಲಿದೆ.
ಸೋಮವಾರ ಬೆಳಿಗ್ಗೆ 10:00ಗಂಟೆಗೆ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿರುವ ಅಬ್ಬೆತುಮಕೂರಿನ ಸಿದ್ದಸಂಸ್ಥಾನ ಮಠದ ಪರಮು ಪೂಜ್ಯ ಶ್ರೀ ಗಂಗಾಧರ ಮಹಾಸ್ವಾಮಿಗಳವರಿಗೆ ವಿದ್ಯಾನಗರ ಕಾಲೋನಿಯ ಮುಖ್ಯಧ್ವಾರದಿಂದ ಸುಮಂಗಲೆಯರ ಕುಂಬ-ಕಳಸ, ಬಾಜಾ ಬಜಂತ್ರಿಗಳೊಂದಿಗೆ ಸಾರೋಟಿನಲ್ಲಿ ದೇವಸ್ಥಾನದವರೆಗೆ ಮೆರವಣಿಗೆ ಜರುಗಲಿದೆ. ಬೆಂಗಳೂರಿನ ಮಾಜಿ ಕ್ರೆಡಲ್ ಅಧ್ಯಕ್ಷರಾದ ಶ್ರಿ ಚಂದು ಬಿ. ಪಾಟೀಲ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಎಂ.ಬಿ. ನಗರ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷರಾದ ಚಂದ್ರಶೇಖರ ತಿಗಡಿ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪುರಾಣ ಪ್ರವಚನಕಾರರಾದ ವೇ|| ಮೂ|| ಮಲ್ಲಿಕಾರ್ಜುನ ಶಾಸ್ತ್ರಿ ಅವರು ಕಾರ್ಯಕ್ರಮದ ನೇತ್ರತ್ವ ವಹಿಸಲಿದ್ದಾರೆ. ವಿದ್ಯಾನಗರ ವೆಲ್ಫೇರ್ ಸೊಸೈಟಿ ಅಧ್ಯಕ್ಷರಾದ ಮಲ್ಲಿನಾಥ ದೇಶಮುಖ ಅಧ್ಯಕ್ಷತೆ ವಹಿಸಲಿದ್ದಾರೆ.
ಸೊಸೈಟಿಯ ಉಪಾಧ್ಯಕ್ಷ ಉಮೇಶಶೆಟ್ಟಿ, ಕಾರ್ಯದರ್ಶಿ ಶಿವರಾಜ ಅಂಡಗಿ, ಖಜಾಂಚಿ ಗುರುಲಿಂಗಯ್ಯ ಮಠಪತಿ, ಮಲ್ಲಿಕಾರ್ಜುನ ತರುಣ ಸಂಘದ ವಿರೇಶ ನಾಗಶೆಟ್ಟಿ, ಕರಣ ಆಂದೋಲಾ ಅಕ್ಕಮಹಾದೇವಿ ಮಹಿಳಾ ಟ್ರಸ್ಟಿನ ರತ್ನಾಬಾಯಿ ನಿಂಬೂರ, ವಿಜಯಲಕ್ಷ್ಮಿ ರಟಕಲ್ ಹಾಗು ಪದಾಧಿಕಾರಿಗಳು ಉಪಸ್ಥಿತರಿರುವರು.
ಭೂಸನೂರಿನ ವೇ|| ಮೂ|| ಗುರುಶಾಂತಯ್ಯ ಸ್ಥಾವರಮಠ ಹಾಗು ವೀರಭದ್ರಯ್ಯ ಸ್ಥಾವರಮಠ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
“ನಗೆ ಹಬ್ಬ” ಅಂದು ಬೆಳಿಗ್ಗೆ 11:00ಗಂಟೆಗೆ ಕಲ್ಯಾಣ ಕರ್ನಾಟಕದ ಬಿ.ಚಿ ಎಂದೇ ಪ್ರಖ್ಯಾತಿ ಪಡೆದ ಖ್ಯಾತ ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ ಹರಸೂರ ಅವರಿಂದ ಹಾಸ್ಯ ಕಾರ್ಯಕ್ರಮ. ತೊಟ್ಟಿಲು ಹಾಗು ಇನ್ನಿತರ ಸಲಕರಣೆಗಳ ಹರಾಜು ನಂತರ ಪೂಜ್ಯಶ್ರೀಗಳಿಂದ ಆಶೀರ್ವಚನ ನಂತರ ಪ್ರಸಾದ ವ್ಯವಸ್ಥೆ ಇರುತ್ತದೆ. ಸಕಲ ಭಕ್ತರು ಆಶೀರ್ವಚನ ಕೇಳಿ ಪ್ರಸಾದ ಸ್ವೀಕರಿಸಬೇಕೆಂದು ವಿದ್ಯಾನಗರ ವೆಲ್ಫೇರ್ ಸೊಸೈಟಿ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…