ಫರತಾಬಾದ: ಕಲ್ಯಾಣ ಕರ್ನಾಟಕದ ಕೋಲಿ ಸಮಾಜದ ನಾಯಕರಾದ ಲಚ್ಚಪ್ಪ ಜಮಾದಾರ ಅವರಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡಬೇಕು. ಎಂದು ಕೋಲಿ ಸಮಾಜದ ಮುಂಖಡರಾದ ಹೊನ್ನಕಿರಣಗಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಬಾಬು ದಸರಾಗೊಳ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಪತ್ರಿಕೆ ಮುಂಖಾತರ ಮನವಿ ಮಾಡಿದ್ದಾರೆ.
ಕೋಲಿ ಸಮಾಜದ ಏಳಿಗೆಗಾಗಿ ಮತ್ತು ಕೋಲಿ ಸಮಾಜವನ್ನು ಜಾಗೃತಿ ಮೂಡಿಸುವಲ್ಲಿ ಹಲವಾರು ವರ್ಷಗಳ ಕಾಲ ಸಮಾಜಕ್ಕಾಗಿ ಹಗಲು ರಾತ್ರಿ ಲೆಕ್ಕಿಸದೆ, ಸಮಾಜವನ್ನು ಕಟ್ಟುವಲ್ಲಿ ಲಚ್ಚಪ್ಪ ಜಮಾದಾರ ಅವರ ಕಾರ್ಯ ನಮ್ಮ ಸಮಾಜಕ್ಕೆ ಬಹಳ ಅವಶ್ಯಕತೆ ಇದೆ. ಈ ಬಾರಿ ನಡೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 7ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಶಾಸಕರು ಆಗಿದ್ದಾರೆ. ಲಚ್ಚಪ್ಪ ಜಮಾದಾರ ಅವರ ಕೂಗಿಗೆ ಅಫಜಲಪೂರ, ಜೇವರ್ಗಿ, ಚಿತ್ತಾಪುರ,ಸೇಡಂ,ಕಲಬುರಗಿ ಉತ್ತರ ಕೇತ್ರ ಸೇರಿ ಇತರೆ ಕೇತ್ರದಲ್ಲಿ ಕೋಲಿ ಸಮಾಜದ ಮತಬಾಂಧವರು ಕಾಂಗ್ರೆಸ್ ಪಕ್ಷ ಬೆಂಬಲಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ.
ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆ, ಜಿಪಂ, ತಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ತರುವಲ್ಲಿ ಪಕ್ಷಪರ ಮತ್ತು ಅಭ್ಯರ್ಥಿಗಳ ಪರ ಕಾರ್ಯ ನಿರ್ವಹಿಸುತ್ತಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಕ್ತವಾಗಿ ಪರಿಗಣಿಸಿ, ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ಹಿಂದುಳಿದ ಕೋಲಿ ಸಮಾಜಕ್ಕೆ ನ್ಯಾಯ ನೀಡಬೇಕು ಎಂದು ಹೊನ್ನಕಿರಣಗಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀಮತಿ ಕೃಷ್ಣಾಬಾಯಿ ಗಂಡ ಶರಣಪ್ಪ ತತ್ತಿ, ವಿಶ್ವರಾಧ್ಯ ಬೆಳಗುಂಪಿ ಅವರು ಆಗ್ರಹಿಸಿದ್ದಾರೆ.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…