ಪ್ರಜಾಪ್ರಭುತ್ವ ದಿನ ಆಚರಿಸೋಣ ಪ್ರಯೋಜನಗಳನ್ನು ಪಡೆಯೋಣ: ಡಾ.ಕೊಂಡಾ

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು ಹಾಗೂ ಐ.ಕ್ಯೂ.ಎ.ಸಿ. ಗಳ ಸಂಯುಕ್ತಾಶ್ರಯದಲ್ಲಿ ” ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ” ವನ್ನು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆ ಓದುವದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರತಿವರ್ಷ 15 ನೇ ಸೆಪ್ಟೆಂಬರ್ 2007 ರಿಂದ ವಿಶ್ವಸಂಸ್ಥೆ ಮತ್ತು ಅದರ ಸದಸ್ಯ ರಾಷ್ಟ್ರಗಳು ಪ್ರಜಾಪ್ರಭುತ್ವ ದಿನವನ್ನು ಸ್ಮರಿಸುತ್ತವೆ.ಪ್ರಜಾಪ್ರಭುತ್ವದ ಸ್ಥಿತಿಯನ್ನು ಪ್ರತಿಬಿಂಬಿಸಲು ಈ ದಿನ ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು ಶಾಂತಿ, ಸುಸ್ತಿರ ಅಭಿವೃದ್ಧಿ ಪ್ರಜಾಪ್ರಭುತ್ವದ ಅಂಶಗಳು ಈ ದಿನದಂದು ಪ್ರಜಾಪ್ರಭುತ್ವದಿಂದಾಗುವ 05 ಪ್ರಯೋಜನಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ನಾಗರಿಕರ ಹಿತಾಸಕ್ತಿಗಳ ರಕ್ಚಣೆ,ಸಮಾನತೆಯ ರಕ್ಚಣೆ,ಅಧಿಕಾರದ ದುರುಪಯೋಗ ತಡೆಗಟ್ಟುದು,ಮಾನವ ಹಕ್ಕುಗಳ ರಕ್ಷಣೆ,ದೇಶದಲ್ಲಿ ಶಾಂತಿ ಸ್ಥಾಪನೆ ಎಂದು ಕರೆನಿಡಿದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ನಾಗೇಂದ್ರ ಮಸೂತಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು, ರಾ.ಸೇ. ಯೋಜನೆಯ ಕಾರ್ಯಕ್ರಮ ಅಧಿಕಾರಿ ಡಾ.ಮಹೇಶ ಗಂವ್ಹಾರ ಎಲ್ಲರನ್ನೂ ಸ್ವಾಗತಿಸಿದರು.

ಉಪನ್ಯಾಸಕಿ ಶ್ರೀಮತಿ ಜ್ಯೋತಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು ಕಾರ್ಯಕ್ರಮದಲ್ಲಿ ಐ.ಕ್ಯೂ ಎ.ಸಿ.ಸಂಯೋಜಕರಾದ ಡಾ.ಶಿವರಾಜ ಗೌನಳ್ಳಿ,ರಾ.ಸೇ.ಯೋ.ಅಧಿಕಾರಿಗಳಾದ ಡಾ.ರೇಣುಕಾ ಹಾಗರಗುಂಡಗಿ, ಸುಷ್ಮಾ ಕುಲಕರ್ಣಿ,ಡಾ.ಪ್ರೇಮಚಂದ್ ಚವ್ಹಾಣ, ಡಾ.ಚಂದ್ರಕಲಾ ಪಾಟೀಲ. ಉಮಾ ರೇವುರ,ವಿದ್ಯಾರ್ಥಿ ಸಂಘದ ಸಲಹೆಗಾರರಾದ ಮಂಗಲಾ ಬಿರಾದರ,ಡಾ.ಶರಣಮ್ಮ ಕುಪ್ಪಿ ,ಡಾ.ಮುಖಿಮಿಯಾ,ಡಾ ಉಸ್ತಾದ ರಶಿದ,ಶ್ರೀ ಶರಣಪ್ಪ ಮುಷ್ಟಳ್ಳಿ, ಶಿಲ್ಪಾ ಬಂದರವಾಡ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.ಎಂದು ನ್ಯಾಕ ಸಂಯೋಜಕರಾದ ಡಾ.ಮೋಹನರಾಜ್ ಪತ್ತಾರ ಪ್ರಕಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420