ಬಿಸಿ ಬಿಸಿ ಸುದ್ದಿ

DPSE ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ

ಕಲಬುರಗಿ; 2019-20 ನೇ ಸಾಲಿನಿಂದ ಸರ್ಕಾರಿ ತರಬೇತಿ ಸಂಸ್ಥೆ ಹಾಗೂ ಹೊಸದುರ್ಗಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೋಮೋ DPSE ಕೋರ್ಸನ್ನು ಆರಂಭಿಸಿರುವುದು ಸರಿಯೇಷ್ಟೇ. ಕಳೆದ 03 ಶೈಕ್ಷಣಿಕ ವರ್ಷಗಳಿಂದ ಸದರಿ ಸಂಸ್ಥೆಗಳಿಂದ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆಯಾಗಿ ನಿರುದ್ದಯೋಗಿಗಳಾಗಿರುವ ಅತಂತ್ರಕ್ಕೆ ಸಿಲುಕಿರುವ ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಳ್ಳಬೇಕೆಂದು ಸಂಘದ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ಎಂ.ಡಿ. ಗೌಸ ವಿಖಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಭಾನುವಾರ ಕಲ್ಯಾಣ ಕರ್ನಾಟಕ ವಿಮೋಚನದಿನಾಚರಣೆ ನಿಮಿತ್ತ ಕಲಬುರಗಿಗೆ ಆಗಮಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು 2018-2019 ನೇ ಸಾಲಿನ ಆಯ ವ್ಯಯ ಘೋಷಣೆಯಂತೆ ಪ್ರಸ್ತುತ ರಾಜ್ಯವ್ಯಾಪಿ 1500ಕ್ಕೂ ಅಧಿಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ತರಗತಿಗಳು ನಡೆಯುತ್ತಿದೆ ಹಾಗೂ 276 ಕರ್ನಾಟಕ ಪಬ್ಲಿಕ್ ಶಾಲೆಗಳು (ಏPS)  ಕಾರ್ಯ ನಿರ್ವಹಿಸುತ್ತಿದ್ದು, ಸದರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ 1 ಮತ್ತು 2ನೇ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಮುಂದುವರೆದು, ಸದರಿ ಶಾಲೆಗಳಲ್ಲಿ ಆ ತರಗತಿಗಳಿಗೆ ಬೋಧಿಸಲು ನಿಗದಿತ ವಿದ್ಯಾರ್ಹತೆ ಹೊಂದಿದ ಹಾಗೂ ತರಬೇತಿ ಪಡೆದ ಶಿಕ್ಷಕರು ಲಭ್ಯವಿರುವುದಿಲ್ಲ. ಇದರಿಂದಾಗಿ ಮಕ್ಕಳ ಕಲಿಕೆಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ ಎಂದು ತಿಳಿಸಿದ್ದಾರೆ.

ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪರಿಣಾಮಕಾರಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿರುವುದು ಶ್ಲಾಘನೀಯ ವಿಚಾರವಾಗಿದೆ. ಬದಲಾದ ಶೈಕ್ಷಣಿಕ ವ್ಯವಸ್ಥೆಯಲ್ಲಿ 5 ವರ್ಷಗಳ (3-8 ವರ್ಷ) ಬುನಾದಿ ಹಂತದ ಕಲಿಕೆ ಹೆಚ್ಚಿನ ಒತ್ತು ನೀಡಿದ್ದು, ಸದರಿ ವಯಸ್ಸಿನ ಮಕ್ಕಳಿಗೆ ಬೋಧಿಸುವ ಕೌಶಲ್ಯವನ್ನು ಆPSಇ ಕೋರ್ಸ ಪೂರೈಸಿದ ವಿದ್ಯಾರ್ಥಿಗಳು ಹೊಂದಿದ್ದು, ಸದರಿ ವಿದ್ಯಾರ್ಥಿಗಳನ್ನು ಶಿಕ್ಷಕ/ಶಿಕ್ಷಕಿಯಾಗಿ ನೇಮಕ ಮಾಡಿಕೊಂಡರೆ 3 ರಿಂದ 8 ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆ ಕಲಿಕೆ/ಅನುಭವದ ಭದ್ರ ಬುನಾದಿ ಹಾಕುವುದರಲ್ಲಿ ಯಾವುದೇ ಸಂಶಯವಿರುವುದಿಲ್ಲ ಹಾಗೂ ತಾಂತ್ರಿಕವಾಗಿಯೂ ಸರಿಯೆನಿಸುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಮಂತ್ರಾಲಯ ರಾಷ್ಟ್ರ ಮಟ್ಟದಲ್ಲಿ ಮೂಲಕ ಪೂರ್ವ ಪ್ರಾಥಮಿಕ ಹಂತದ ಪಠ್ಯಕ್ರಮ ಆರಂಭಿಸಲು ಹಸಿರು ನಿಶಾಲೆ ತೋರಿಸಲಾಗಿದೆ.

ಕೋರ್ಸ ತೇರ್ಗಡೆಯಾದ ಅಭ್ಯರ್ಥಿಗಳನ್ನು ಆಂಗ್ಲ ಮಾಧ್ಯಮದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಕೆ ಪಿ ಎಸ್ ಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲು ಅಗತ್ಯವಿರುವ ವೃಂದ ಮತ್ತು ನೇಮಕಾತಿ ನಿಯಮ (ಅ&ಖ) ಗಳನ್ನು ರಚನೆ ಮಾಡಿ ನೇಮಕಾತಿ ಮಾಡಿಕೊಳ್ಳಲು ಸೂಕ್ತ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago