ಬಿಸಿ ಬಿಸಿ ಸುದ್ದಿ

ಸುರಪುರ: ವಿಶ್ವಕರ್ಮ ಜಯಂತಿ ಭಾವಚಿತ್ರ ಮೆರವಣಿಗೆ

ಸುರಪುರ: ತಾಲೂಕು ವಿಶ್ವಕರ್ಮ ಸಮಾಜ ಹಾಗೂ ವಿಶ್ವಕರ್ಮ ತರುಣ ಸಂಘಗಳ ಸಹಯೋಗದಲ್ಲಿ ನಗರದಲ್ಲಿ ರವಿವಾರದಂದು ಭಗವಾನ್ ವಿಶ್ವಕರ್ಮ ಜಯಂತ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ನಗರದ ಕಬಾಡಗೇರಾ ಶ್ರೀ ಕಾಳಿಕಾದೇವಸ್ಥಾನದ ಬಳಿ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಲಾಯಿತು, ಸುರಪುರ ಸಂಸ್ಥಾನದ ಅರಸು ಮನೆತನದ ರಾಜಾ ಲಕ್ಷ್ಮೀನಾರಾಯಣ ನಾಯಕ, ನಗರಸಭೆ ಸದಸ್ಯ ವೇಣುಮಾಧವ ನಾಯಕ ಹಾಗೂ ತಹಶೀಲ್ದಾರ ವಿಜಯಕುಮಾರ.ಕೆ. ಅವರು ಮೆರವಣಿಗೆಗೆ ಚಾಲನೆ ನೀಡಿದರು.

ನಗರದ ಪ್ರಮುಖ ರಸ್ತೆಗಳ ಮೂಲಕ ವಿಜೃಂಭಣೆಯಿಂದ ಮೆರವಣಿಗೆ ಜರುಗಿತು, ಸಮಾಜದ ಹಿರಿಯರಾದ ನಾಗಲಿಂಗಪ್ಪ ಶಹಾಪುರಕರ, ಅಡಿವೆಪ್ಪ ಕುಂಟೋಜಿ, ದೇವಸ್ಥಾನದ ಅರ್ಚಕರಾದ ಮೌನೇಶ, ಅಭಿಷೇಕ, ಪ್ರಮುಖರಾದ ನಾರಾಯಣ ಪತ್ತಾರ, ಪ್ರಭು ಪತ್ತಾರ ಕಲಕೇರಿ, ಮನೋಹರ ಕುಂಟೋಜಿ, ಪಂಪಣ್ಣ ಹಳಿಸಗರ, ರವಿ ಶಹಾಪುರಕರ, ಗಂಗಾಧರ ಕರಣಗಿ, ರಾಜಶೇಖರ ಕಲಕೇರಿ, ಮಹೇಶ ಸಗರ, ಮಹೇಶ ಶಾರದಳ್ಳಿ, ಪ್ರಭು ಚನ್ನಪಟ್ಟಣ, ದೇವಿಂದ್ರ ತಳವಾರಗೇರಾ, ರಾಜು ನಿಡಗುಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ತಹಸಿಲ್ದಾರ್ ಕಚೇರಿ: ನಗರದ ತಹಸೀಲ್ದಾರ ಕಚೇರಿಯಲ್ಲಿ ಸರಳವಾಗಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.ತಹಸೀಲ್ದಾರ್ ವಿಜಯಕುಮಾರ ಕೆ ಅವರು ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ವಂದಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಕಚೇರಿ ಸಿರಸ್ತೆದಾರ ಗುರುಬಸಪ್ಪ ಪಾಟೀಲ್,ಅವಿನಾಶ,ಪ್ರವೀಣಕುಮಾರ,ರವಿ ನಾಯಕ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago