ಬಿಸಿ ಬಿಸಿ ಸುದ್ದಿ

ರಾಜ್ಯದಾದ್ಯಂತ 40 ಕೋಟಿ ವೆಚ್ಚದಲ್ಲಿ 4,000 “ಕೂಸಿನ ಮನೆ” ಸ್ಥಾಪನೆ: ಕಲಬುರಗಿಯಲ್ಲಿ ಲೋಗೊ ಬಿಡುಗಡೆ ಮಾಡಿದ ಸಿಎಂ

ಕಲಬುರಗಿ: ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ತೆರೆಯಲಾಗುತ್ತಿರುವ “ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳ ಲೋಗೋವನ್ನು ರವಿವಾರ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.

ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ‌ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ನಂತರ ಯೋಜನೆಯ ಲೋಗೋವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಸಚಿವ ಪ್ರಿಯಾಂಕ್ ಖರ್ಗೆ‌ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಸಿ.ಎಂ. ಅವರು ಅನಾವರಣಗೊಳಿಸಿದರು.

ರಾಜ್ಯ ಸರ್ಕಾರ “ಕೂಸಿನ‌ ಮನೆ” ತೆರೆಯಲು 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದಾದರು, ಶಿಶುಪಾಲನಾ ಕೇಂದ್ರ ನಡೆಸಲು ಅಗತ್ಯವಿರುವ ಕಟ್ಟಡ, ಇತರ ಮೂಲ ಸೌಲಭ್ಯಗಳನ್ನು ಹಾಗೂ ಅನುದಾನವನ್ನು ಗ್ರಾಮ ಪಂಚಾಯಿತಿಗಳು ತಮ್ಮ‌ ಸಂಪನ್ಮೂಲದಲ್ಲಿಯೇ ಹೊಂದಿಸಬೇಕಾಗುತ್ತದೆ.

ಪ್ರಸಕ್ತ 2023-24ರ ಅಯವ್ಯಯ ಭಾಷಣದಲ್ಲಿನ ಘೋಷಣೆಯಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು “ಕೂಸಿನ ಮನೆ” ಶಿಶುವಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. “ಕೂಸಿನ ಮನೆ’ ಕೆಂದ್ರಗಳು ಸ್ಥಳೀಯ ಕಾರ್ಮಿಕರ ಅನುಕೂಲಕ್ಕೆ ತಕ್ಕಂತೆ ದಿನದಲ್ಲಿ 6 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಗ್ರಾಮ ಪಂಚಾಯಿತಿಗಳೇ ಕೇಂದ್ರದ ಕಾರ್ಯನಿರ್ವಹಿಸುವ ಸಮಯವನ್ನು ನಿರ್ಧರಿಸಲಿದೆ.

*ಪ್ರತಿ ಕೇಂದ್ರದಲ್ಲಿ ‌10 ಜನ ಕೇರ್ ಟೇಕರ್ಸ್:*

4000 ಶಿಶು ಪಾಲನಾ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ 10 ಜನ ಕೇರ್ ಟೇಕರ್ಸ್‌ಗಳನ್ನು (ಮಕ್ಕಳ ಆರೈಕೆದಾರರು) ಇರಲಿದ್ದಾರೆ. ಇವರಿಗೆ ಮೊಬೈಲ್ ಕ್ರಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುವುದು. ಇದರಿಂದ 40,000 ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಕ್ಕಳ ಆರೈಕೆಯ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

*ಪ್ರತಿ ಕೇಂದ್ರದಲ್ಲಿ 25 ಜನ‌ ಮಕ್ಕಳಿಗೆ ಅವಕಾಶ:*

ಪ್ರತಿ ‘ಕೂಸಿನ ಮನೆ’ ಕೇಂದ್ರದಲ್ಲಿ ನರೇಗಾ ಕ್ರಿಯಾಶೀಲ ಉದ್ಯೋಗ ಹಾರ್ಡ್ ಹೊಂದಿರುವ ಕುಟುಂಬದ 3 ವರ್ಷದೊಳಗಿನ ಗರಿಷ್ಠ 25 ಮಕ್ಕಳನ್ನು ದಾಖಲೆ ಮಾಡಿಕೊಳ್ಳಲು ಅವಕಾಶ ಇರಲಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ಎಂ.ಎಲ್.ಸಿ ತಿಪ್ಪಣಪ್ಪ ಕಮಕನೂರ, ಕಲಬುರಗಿ ಮೇಯರ್ ವಿಶಾಲ ಧರ್ಗಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾಂಸಿಸ್, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಐ.ಜಿ.ಪಿ. ಅಜಯ್ ಹಿಲೋರಿ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ‌ ಇದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

13 mins ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

12 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

14 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

14 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago