ಕಲಬುರಗಿ: ಮನುಷ್ಯನ ಮನಸ್ಸು ಶುದ್ಧಿಕರಣಗೊಳ್ಳಲು ಸಮಾಜಕ್ಕೆ ಆದರ್ಶವಾಗಿ ಬದುಕಿದ ಶರಣ, ಸಂತರ, ಮಹಾಂತರ ಜೀವನವೇ ನಮಗೆ ದಾರಿದೀಪವಾಗಬೇಕು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಹೇಳಿದರು.
ನಿನ್ನೆ ಉಪಳಾಂವ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವರ ಏಳನೇಯ ಜಾತ್ರಾ ಮಹೋತ್ಸವದ ನಿಮಿತ್ಯ ಶ್ರೀ ಹಾರಕೂಡ ಚನ್ನಬಸವ ಶಿವಯೋಗಿಗಳ ಮಹಾಪುರಾಣ ಕಾರ್ಯಕ್ರಮದ ಅತಿಥಿ ಸ್ಥಾನ ವಹಿಸಿ ಮಾತನಾಡುತ್ತಾ ಮಾನವೀಯ ಮೌಲ್ಯಗಳಿಂದ ಸುಂದರ ಸಮಾಜ ನಿರ್ಮಿಸುವುದು ಆದ್ಯ ಕರ್ತವ್ಯವಾಗಿದೆ. ಇಂದಿನ ಮಕ್ಕಳಿಗೆ ಅಧ್ಯಾತ್ಮದ ವಿಷಯ, ಪುರಾಣ, ಪ್ರವಚನವೆಂದರೆ ಬೇಸರದ ವಿಷಯವಾಗಿದೆ. ಅತಿಯಾದ ಮೊಬೈಲ್ ಬಳಕೆಯಿಂದ ಯುವಕರು ತಮ್ಮ ಜೀವನ ಹಾಳೂ ಮಾಡಿಕೊಳ್ಳುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿದರು. ಪುರಾಣ, ಪ್ರವಚನ ಕಾರ್ಯಕ್ರಮಗಳು ಗ್ರಾಮೀಣ ಜನರನ್ನು ಒಂದುಗೂಡಿಸುವುದರೊಂದಿಗೆ ಸಮಾಜದಲ್ಲಿ ಉತ್ತಮ ಸಂಸ್ಕಾರದ ಬೀಜ ಬಿತ್ತುವ ಕಾರ್ಯ ಮಾಡುತ್ತದೆ. ಜಾತಿ, ಮತ, ಪಂಥ ಮೀರಿ ಒಳ್ಳೆಯ ಸಮಾಜ ನಿರ್ಮಿಸುವ ಶಕ್ತಿ ಅಧ್ಯಾತ್ಮಿಕತೆಯ ಕಾರ್ಯಕ್ರಮದಲ್ಲಿ ಇದೆ ಎಂದು ಹೇಳಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ಹಾರಕೂಡ ಶ್ರೀಮಠದ ಪೂಜ್ಯರಾದ ಶ್ರೀ ಷ.ಬ್ರ. ಡಾ. ಚನ್ನವೀರ ಶಿವಾಚಾರ್ಯರು ವಹಿಸಿದ್ದರು.
೧೧ ದಿನಗಳ ಮಹಾಪುರಾಣವನ್ನು ವೇದಮೂರ್ತಿ ಮಲ್ಲಿಕಾರ್ಜುನ ಟೆಂಗಳಿಯವರು ತಮ್ಮ ಅಮೃತವಾಣಿಯಿಂದ ಹೇಳುತ್ತಿದ್ದು ಅವರಿಗೆ ಸಂಗೀತ ಕಲಾವಿದರಾದ ಶಿವಶರಣಯ್ಯ ಸ್ವಾಮಿ ಬೀದಿಮನಿ, ತಬಲಾ ಸಾಥ್ ಮಹಾಂತೇಶ ಹರವಾಳ ನೀಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಉಪಳಾಂವ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…