ಕಲಬುರಗಿ: ಗೃಹ ರಕ್ಷಕ ದಳದ ( ಹೋಂಗಾಡ್೯) ಕಲಬುರಗಿ ಜಿಲ್ಲಾ ಸಮಾದೇಷ್ಠರಾದ ಸಂತೋಷಕುಮಾರ ಪಾಟೀಲ್ ಅವರಿಗೆ ಶುಕ್ರವಾರ 2022ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಪಾಟೀಲ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು.
ಗೃಹ ರಕ್ಷಕ ಮತ್ತು ಸಂರಕ್ಷಣಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಒಟ್ಟಾರೆ 17 ಅಧಿಕಾರಿ-ಸಿಬ್ಬಂದಿಯವರಿಗೆ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದು, ಅವರಲ್ಲಿ ಸಂತೋಷಕುಮಾರ ಪಾಟೀಲ ಅವರು ಒಬ್ಬರಾಗಿದ್ದಾರೆ. ದೇಶದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಚಿನ್ನದ ಪದಕ ಪ್ರಕಟಿಸಲಾಗಿತ್ತು.
ಕಳೆದ ಐದು ವರ್ಷಗಳಿಂದ ಗೃಹ ರಕ್ಷಕ ದಳದ ಕಲಬುರಗಿ ಜಿಲ್ಲಾ ಸಮಾದೇಷ್ಟ (ಹೋಂಗಾಡ್೯ ಕಮಾಂಡೆಂಟ್) ರಾಗಿ ಸೇವೆ ಸಲ್ಲಿಸುತ್ತಿರುವ ಸಂತೋಷಕುಮಾರ ಪಾಟೀಲ್ ಅವರು ಕೊರೋನಾ ವೇಳೆಯಲ್ಲಿ ಅಮೋಘ ಸೇವೆ, ಹೋಂಗಾಡ್೯ ಸೇವೆ ಬಲಪಡಿಸಿರುವುದು ಜೊತೆಗೇ ಹೋಂಗಾಡ್೯ ಸಂಖ್ಯೆ ಹೆಚ್ಚಿಸಿರುವುದರಿಂದ ಸರ್ಕಾರ ಅವರ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿ ಗಳ ಚಿನ್ನದ ಪದಕ ಗೌರವ ನೀಡಿ ಗೌರವಿಸಿದೆ.
ಚಿನ್ನದ ಪದಕ ಪ್ರೇರಣೆ ಹೆಚ್ಚಿಸಿದೆ: ಗೃಹ ರಕ್ಷಕ ದಳದ ಸೇವೆ ಬಲಪಡಿಸಲು ಪ್ರಮಾಣಿಕ ಸೇವೆ ಹಾಗೂ ಸೇವಾ ಕಾರ್ಯ ವಿಸ್ತರಿಸಲು ಮುಖ್ಯಮಂತ್ರಿಗಳ ಚಿನ್ನದ ಪದಕ ಮತ್ತಷ್ಟು ಪ್ರೇರಣೆ ನೀಡಿದೆ ಎಂದು ಸಂತೋಷ ಕುಮಾರ ಪಾಟೀಲ್ ಹರ್ಷದಿಂದ ನುಡಿದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…