ಪಂಡಿತ್ ಪುಟ್ಟರಾಜ ಗವಾಯಿಗಳ ಸ್ಮರಣೋತ್ಸವ ನಿಮಿತ್ಯ ಗೌರವ ಸನ್ಮಾನ

0
18

ಕಲಬುರಗಿ; ಕನ್ನಡ ಜಾನಪದ ಪರಿಷತ ತಾಲೂಕ ಉತ್ತರ ವಲಯದ ವತಿಯಿಂದ ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಬೆಳಗ್ಗೆ 10 ಗಂಟೆಗೆ ಕಲಬುರಗಿ ನಗರದ ಆರಾಧನಾ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ಸಂಗೀತ ಕಲಾವಿದರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ್ ಹೇಳಿದ್ದಾರೆ.

ಕಾರ್ಯಕ್ರಮ ಕೆಎಸ್ಆರ್ ಪಿ ಕಮಾಂಡೆಂಟ್ ರಾದ ಬಸವರಾಜ ಜಿಳ್ಳೆ ಯವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜಕೀಯ ಮುಖಂಡರಾದ ನೀಲಕಂಠರಾವ ಮೂಲಗೆ, ಹಿರಿಯ ಸಂಗೀತ ಕಲಾವಿದರಾದ ಅಮರಪ್ರಿಯ ಹಿರೇಮಠ, ಕಜಾಪ ಜಿಲ್ಲಾ ಅಧ್ಯಕ್ಷರಾದ ಎಂ ಬಿ ನಿಂಗಪ್ಪ, ಮಾತೋಶ್ರೀ ಮಹಿಳಾ ಮಹಾವಿದ್ಯಾಲಯದ ಅಧ್ಯಕ್ಷರಾದ ಡಾ. ಶಿವಶಂಕರ ಪೂಜಾರಿ, ಶರಣ ಚಿಂತಕರಾದ ಬಾಬುರಾವ ಪಾಟೀಲ ಚಿತ್ತಕೋಟ ಆಗಮಿಸಲಿದ್ದರೆ.

Contact Your\'s Advertisement; 9902492681

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರಾಧನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ  ಚೇತನಮಾರ್ ಗಾಂಗಜಿ ವಹಿಸಲಿದ್ದಾರೆ ಇದೇ ಸಂದರ್ಭದಲ್ಲಿ ಹಿರಿಯ ಸಂಗೀತ ಕಲಾವಿದರಾದ ಪಂಡಿತ ರೇವಯ್ಯ ವಸ್ತ್ರದಮಠ, ಶಿವರುದ್ರಯ್ಯ ಸ್ವಾಮಿ ಗೌಡಗಾಂವ, ಬಸವರಾಜ ಪಾಟೀಲ ಜಂಬಗಾ (ಬಿ) ದೇವಿದಾಸ ಗೊಂಧಳಿ, ಮಹಾಂತೇಶ ಮೇತ್ರಿ ಅವರಿಗೆ ವಿಶೇಷವಾಗಿ ಗೌರವ ಸನ್ಮಾನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here