ಕಲಬುರಗಿ: ಒಂದು ದೇಶ, ಒಂದು ನಾಡು ಬೆಳೆಯಬೇಕಾದರೆ ಪ್ರತಿಯೊಬ್ಬರ ಕಾರ್ಯ ಪ್ರಮುಖವಾಗಿರುತ್ತದೆ. ಒಂದು ನಾಡು ಸಶಕ್ತವಾಗಿ ಬೆಳೆಯಬೇಕಾದರೆ ಮಹಿಳೆಯರ ಪಾತ್ರ ಪ್ರಮುಖ ಎಂದು ನಗರದ ಪ್ರತಿಷ್ಠಿತ ಶ್ರೀಮತಿ ವ್ಹಿ ಜಿ ಮಹಿಳಾ ಪದವಿ ಕಾಲೇಜಿನಲ್ಲಿ ಆಯೋಜಿಸಿದ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದವನ್ನೂ ಉದ್ಘಾಟಿಸಿದ ಗುಲಬರ್ಗಾ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಶ್ರೀಮತಿ ಪ್ರತಿಭಾ ಛಾಮಾ ಅವರು ನುಡಿದರು.
ಮುಂದುವರೆದು ದೇಶ ಅಭಿವೃದ್ಧಿ ಯಾಗಬೇಕಾದರೆ ಪ್ರತಿಯೊಬ್ಬರ ಕರ್ತವ್ಯ ಪ್ರಮುಖ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ವಹಿಸಿಕೊಂಡು ರಾಷ್ಟ್ರೀಯ ಸೇವಾ ಯೋಜನೆಯ ಆವಶ್ಯಕತೆ ಕುರಿತು ಮಾತನಾಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಉಪ ಪ್ರಾಚಾರ್ಯರಾದ ಉಮಾ ರೇವೂರ್, ಡಾ. ಚಂದ್ರಕಲಾ ಪಾಟೀಲ್, ಮಂಗಳಾ ಬಿರಾದಾರ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರ್ವಹಣೆಯನ್ನು ಕು. ಅಂಜಲಿ ಯಾದವ ಮಾಡಿದರು. ಅತಿಥಿಗಳ ಸ್ವಾಗತವನ್ನೂ ಡಾ. ರೇಣುಕಾ ಹಾಗರಗುಂಡಗಿ ಮಾಡಿದರು. ಅತಿಥಿ ಪರಿಚಯವನ್ನೂ ಸುಷ್ಮಾ ಕುಲಕರ್ಣಿಯವರು ಮಾಡಿದರು.
ಕಾರ್ಯಕ್ರಮದಲ್ಲಿ ಡಾ. ನಾಗೇಂದ್ರ ಮಸೂತಿ, ಡಾ. ಪ್ರೇಮಚಂದ ಚವ್ಹಾಣ, ಡಾ. ಜ್ಯೋತಿಪ್ರಕಾಶ ದೇಶಮುಖ, ಡಾ. ಶರಣಮ್ಮ ಕುಪ್ಪಿ, ಶ್ರೀಮತಿ ಶಿವಲೀಲಾ ದೊತ್ರೆ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಸ್ವಯಂ ಸೇವಕರು ಉಪಸ್ಥಿತರಿದ್ದರು.
ಕಲಬುರಗಿ: ರಾಜ್ಯದ "ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ.…
ಕಲಬುರಗಿ: ಕಲ್ಯಾಣ ಕರ್ನಾಟಕದ ಮಹಾನಗರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಕಂಪ್ಯೂಟರ್ ಬೆರಳಚ್ಚುಗಾರರ ಹಾಗೂ ಜೆರಾಕ್ಸ್ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳ ಸಂಘದ…
ಕಲಬುರಗಿ: ಜಿಲ್ಲೆಯ ಕಾಳಗಿ ತಾಲ್ಲೂಕಿನ ಧಾರ್ಮಿಕ ದತ್ತಿ ಇಲಾಖೆಯ ರಟಕಲ್ (ರೇವಗ್ಗಿ) ಶ್ರೀ ರೇವಣಸಿದ್ದೇಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.…
ಸುರಪುರ: ನಗರದ ಬಸ್ ನಿಲ್ದಾಣದ ಬಳಿಯ ಶ್ರೀ ಕೃಷ್ಣದ್ವೈಪಾಯನ ತೀರ್ಥರ ಮಠದಲ್ಲಿ ಸಾಮೂಹಿಕ ಯಜ್ಞೋಪವಿತ ಧಾರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ…
ಸುರಪುರ: ಬದುಕಿನಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಮೋಕ್ಷ ಎನ್ನುವುದು ತುಂಬಾ ಮುಖ್ಯವಾದುದು,ಆ ಮೋಕ್ಷವನ್ನು ಕಾಣಬೇಕಾದರೆ ಸಂಸ್ಕಾರಯುಕ್ತ ಆಚರಣೆಗಳು ಹಾಗೂ ಧರ್ಮ ಮತ್ತು…
ಸುರಪುರ: 12ನೇ ಶತಮಾನದ ಬಸವಾದಿ ಶರಣರ ಸವiಕಾಲಿನ ಶರಣರಲ್ಲಿ ನುಲಿಯ ಚಂದಯ್ಯನವರು ಕಾಯಕ ಜೀವಿ ಶರಣರಾಗಿದ್ದರು ಎಂದು ತಹಸಿಲ್ದಾರ್ ಕೆ.ವಿಜಯಕುಮಾರ…