ಕಲಬುರಗಿ: ಕೆ.ಎ.ಎಸ್ ಹಿರಿಯ ಅಧಿಕಾರಿ ಜೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾಗಿದ್ದ ಪ್ರಮೀಳಾ ಎಂ. ಕೆ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಉಪ ಕಾರ್ಯದರ್ಶಿಯಾಗಿ ಸೆಪ್ಟೆಂಬರ್ 25ರಂದು ಸೋಮವಾರ ಅಧಿಕಾರ ಸ್ವೀಕರಿಸಿದರು.
ಜೆಸ್ಕಾಂ ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಧಾನ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಅವರು ಹೆಚ್ಚುವರಿಯಾಗಿ ಅಪರ ಪ್ರಾದೇಶಿಕ ಆಯುಕ್ತರಾಗಿ ಸುಮಾರು ಮೂರುವರೆ ವರ್ಷಗಳ ಕಾಲ ಹೆಚ್ಚುವರಿಯಾಗಿ ಕಾರ್ಯ ನಿರ್ವಹಿಸಿದ್ದರು. ಮೂಲತ: ಕಲಬುರಗಿಯವ ಯವರಾದ ಇವರು 1999ರ ಕೆಎಎಸ್ ಬ್ಯಾಚ್ ಅಧಿಕಾರಿಯಾಗಿದ್ದು ಇದೀಗ ಹಿರಿಯ ಶ್ರೇಣಿಯ ಅಧಿಕಾರಿಯಾಗಿ ಭಡ್ತಿ ಹೊಂದಿದ್ದರು.
ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಆಯುಕ್ತರಾಗಿ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು .
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…
ಕಲಬುರಗಿ: ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರುಗಳು ಮತ್ತು ಸ್ಥಳಿಯ ಶಾಸಕರುಗಳು…