ವಿಶ್ವಮಾನವ ಚಿಂತನಾಗೋಷ್ಠಿ 28 ರಂದು

0
32

ವಾಡಿ: ಪಟ್ಟಣದಲ್ಲಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಹಾಗೂ ಆವಿಷ್ಕಾರ ಪ್ರಗತಿಪರ ಸಾಂಸ್ಕøತಿಕ ವೇದಿಕೆ ಸಹಯೋಗದಲ್ಲಿ ಸೆ.28 ರಂದು ಬೆಳಗ್ಗೆ 10:00 ಗಂಟೆಗೆ ನಗರದ ನಿಜಶರಣ ಅಂಬಿಗರ ಚೌಡಯ್ಯ ಭವನದಲ್ಲಿ ವಿಶ್ವಮಾನವ ಚಿಂತನಾಗೋಷ್ಠಿ ಏರ್ಪಡಿಸಲಾಗಿದೆ.

ಮಹಾನ್ ಮಾನವತಾವಾದಿ ಹಾಗೂ ನವೋದಯದ ಹರಿಕಾರ ಈಶ್ವರಚಂದ್ರ ವಿದ್ಯಾಸಾಗರ ಅವರ 203ನೇ ಜನ್ಮದಿನ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗುಲಬರ್ಗಾ ವಿವಿ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ರಮೇಶ ಲಂಡನಕರ್ ಹಾಗೂ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಕಾರ್ಯದರ್ಶಿ ಮಹೇಶ ಎಸ್.ಜಿ ವಿಚಾರ ಮಂಡಿಸುವರು.

Contact Your\'s Advertisement; 9902492681

ಆವಿಷ್ಕಾರ ಪ್ರಗತಿಪರ ಸಾಂಸ್ಕøತಿಕ ವೇದಿಕೆಯ ಜಿಲ್ಲಾ ಸಂಘಟನಾಕಾರ ಮಡಿವಾಳಪ್ಪ ಹೇರೂರ ಅಧ್ಯಕ್ಷತೆ ವಹಿಸುವರು. ಶಿಕ್ಷಣ ಉಳಿಸಿ ಸಮಿತಿಯ ಸಂಘಟನಾಕಾರರಾದ ಪದ್ಮರೇಖಾ ಆರ್.ಕೆ ಪ್ರಾಸ್ತಾವಿಕ ನುಡಿವರು ಎಂದು ಶಿಕ್ಷಕ ರಮೇಶ ಮಾಶಾಳಕರ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here