ಬಿ ಆರ್ ಪಾಟೀಲ ಬಹಿರಂಗ ಕ್ಷಮೆಯಾಚಿಸಲಿ; ಹರ್ಷಾನಂದ ಗುತ್ತೇದಾರ

ಆಳಂದ; ಶಾಸಕ ಬಿ ಆರ್ ಪಾಟೀಲ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂಗಳ ಬಗ್ಗೆ ನೀಡಿರುವ ಹೇಳಿಕೆ ಅವರ ದಿವಾಳಿತನವನ್ನು ಎತ್ತಿ ತೋರಿಸುತ್ತದೆ ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಅಭಿಪ್ರಾಯಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚಿಗೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನ ಸಂದರ್ಭದಲ್ಲಿ ಆಳಂದ ಶಾಸಕ ಬಿ ಆರ್ ಪಾಟೀಲ ಪ್ರಧಾನಿ ಮೋದಿಯವರ ಕಾರ್ಯಕ್ಷಮತೆ ಬಗ್ಗೆ ಮಾತನಾಡುತ್ತಾ ಫುಲ್ವಾಮಾ ದಾಳಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪ್ರಧಾನಿಯವರ ಮೇಲೆ ಸುಳ್ಳು ಆಪಾದನೆಗಳನ್ನು ಮಾಡುತ್ತಾ ಆಧಾರರಹಿತವಾಗಿ ಟೀಕೆ ಮಾಡಿದ್ದಾರೆ ಇದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಈಡೀ ಜಗತ್ತೇ ಒಪ್ಪಿಕೊಂಡಿದೆ ಮತ್ತು ಅವರ ನಾಯಕತ್ವದ ಮೇಲೆ ವಿಶ್ವಾಸವಿರಿಸಿದೆ ಆದರೆ ತಾವು ಮಾತ್ರ ಒಂದು ವರ್ಗವನ್ನು ಒಲೈಸಿಕೊಳ್ಳುವುದಕ್ಕಾಗಿ ನಿರಂತರವಾಗಿ ಹಿಂದೂಗಳ ಅವಹೇಳನ ಮಾಡುವ ಕಾರ್ಯ ಮಾಡುತ್ತೀದ್ದೀರಿ ಇದು ತುಷ್ಠೀಕರಣದ ರಾಜಕಾರಣವಲ್ಲದೇ ಮತ್ತೇನು ಎಂದು ಪ್ರಶ್ನಿಸಿದ್ದಾರೆ.

ಶಾಸಕ ಬಿ ಆರ್ ಪಾಟೀಲ ಸಚಿವರ ಮೇಲಿನ ದ್ವೇಷವನ್ನು, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟವನ್ನು ಮರೆಮಾಚುವ ದುರುದ್ದೇಶದಿಂದ ಫುಲ್ವಾಮಾ ದಾಳಿಯನ್ನು ಸತ್ಯಪಾಲ ಮಲ್ಲಿಕರ ಹೇಳಿಕೆಯನ್ನು ಉಲ್ಲೇಖಿಸಿ ಹೇಳಿದ್ದಾರೆ ಆದರಿಂದ ಇಬ್ಬರ ಮೇಲೂ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿಯನ್ನು ದ್ವೇಷಿಸುವ ಭರದಲ್ಲಿ ದೇಶದ ಭದ್ರತೆ ಮತ್ತು ಸುರಕ್ಷತೆಯನ್ನು ಅಪಮಾನಗೊಳಿಸಿ ಸೈನಿಕರಿಗೆ ದೇಶವಾಸಿಗಳಿಗೆ ಅವಮಾನ ಮಾಡಿದ್ದಾರೆ ಅಲ್ಲದೇ ಅವರು ನೀಡಿರುವ ಹೇಳಿಕೆಯು ಭಯೋತ್ಪಾದನೆಗೆ, ಭಯೋತ್ಪಾದಕರಿಗೆ ಪ್ರಚೋದನೆ ನೀಡಿರುವಂತಿದೆ ಕೂಡಲೇ ಸೈನಿಕರ ಮತ್ತು ದೇಶದ ಜನರ ಬಳಿ ಬಹಿರಂಗ ಕ್ಷಮೆ ಕೋರಬೇಕು. ಕೇವಲ ಅಧಿಕಾರದ ಆಸೆಯಿಂದ ಷಡ್ಯಂತ್ರದಿಂದ ವಿರೋಧಿ ಒಕ್ಕೂಟದವರು ದಾಳಿ ನಡೆದೇ ಇಲ್ಲವೆಂದು ಜನರಲ್ಲಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ದಾಳಿಯ ಬಗ್ಗೆ ಸ್ವತ: ಪಾಕಿಸ್ತಾನವೇ ಒಪ್ಪಿಕೊಂಡಿದೆ. ಈ ಕುರಿತು ದೇಶವಾಸಿಗಳ ಕ್ಷಮೆ ಕೇಳಬೇಕು ಇಲ್ಲದಿದ್ದರೇ ಅವರ ವಿರುದ್ಧ ಜನಾಂದೋಲನ ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಶಾಸಕ ಬಿ ಆರ್ ಪಾಟೀಲ ತಮ್ಮ ಕೀಳುಮಟ್ಟದ ರಾಜಕಾರಣಕ್ಕಾಗಿ ದೇಶವನ್ನು, ಪ್ರಧಾನಿಗಳನ್ನು, ಸೈನಿಕರ ಸಾಮಥ್ರ್ಯವನ್ನು ಅವಮಾನಿಸಿ ತುಷ್ಠೀಕರಣ ರಾಜಕಾರಣ ಮಾಡುತ್ತಿದ್ದಾರೆ. ಇದು ಅವರ ನೈತಿಕ ಅಧಪತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಜನ ನಿಮಗೆ ಐದು ವರ್ಷಗಳವರೆಗೆ ಜನಾದೇಶ ನೀಡಿದ್ದಾರೆ ಈ ಅವಧಿಯಲ್ಲಿ ಜನೋಪಯೋಗಿ ಕಾರ್ಯಗಳನ್ನು ಮಾಡಿ ಅದನ್ನು ಬಿಟ್ಟು ಹೀಗೆ ದೇಶವನ್ನು ಹೀಗೆಳೆಯುವ ಕೆಲಸ ಮಾಡಬೇಡಿ. ತಾವು ಗೆದ್ದಾಗಿನಿಂದ ಜನ ಎಲ್ಲವನ್ನು ಅವಲೋಕಿಸುತ್ತಿದ್ದಾರೆ ಎಂದು ತೀರುಗೆಟು ನೀಡಿದ್ದಾರೆ.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

2 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

3 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

5 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

16 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

18 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420