ಕಲಬುರಗಿ: ಇನ್ಟ್ಯಾಕ್ ಕಲಬುರಗಿ ಅಧ್ಯಾಯ ಹಾಗೂ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋಧ್ಯಮ ದಿನಾಚರಣೆಯ ಅಂಗವಾಗಿ ‘ಕಲಬುರಗಿ ಕೋಟೆಯ ದರ್ಶನ’ವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಇನ್ಟ್ಯಾಕ್ ಕಾರ್ಯದರ್ಶಿಗಳಾದ ರಿಜವಾನ್ ಉರ್-ರಹಮಾನ್ ಸಿದ್ದೀಕಿಯವರು ಉದ್ಘಾಟಿಸಿ, ಕಲಬುರಗಿ ಕೋಟೆಯು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಆದರೆ ಈ ಕೋಟೆಯನ್ನು ಸ್ವಚ್ಛಗೊಳಿಸಿದರೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ ಎಂದು ಹೇಳಿದರು.
ಡಾ.ಬಿ.ಎಸ್. ಗುಲಶೆಟ್ಟಿ ಇನ್ಟ್ಯಾಕ್ ಅಧ್ಯಕ್ಷರು ಇವರು ಸ್ಥಳಿಯ ಸ್ಮಾರಕಗಳ ಮತ್ತು ಪ್ರವಾಸೋಧ್ಯಮ ಕುರಿತು ಮಾತನಾಡಿದರು.
ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ಭೀಮಣ್ಣ ಘನಾತೆ ಮುಖ್ಯಸ್ಥರು ಇತಿಹಾಸ ವಿಭಾಗ, ಇವರು ಕಲಬುರಗಿ ಕೋಟೆಯ ಜಾಮಿ ಮಸೀದಿಯ ವಿಶೇಷತೆಯನ್ನು ಕುರಿತು, ಡಾ. ಮಲ್ಲಿಕಾರ್ಜುನ ಶೆಟ್ಟಿ ವಿಶ್ವ ಪ್ರವಾಸೋಧ್ಯಮದ ವಿಶೇಷತೆ ಹಾಗೂ ವಿಶ್ವ ಪ್ರವಾಸೋಧ್ಯಮಕ್ಕೆ ಕಲಬುರಗಿಯ ಕೊಡುಗೆಗಳನ್ನು ಕುರಿತು, ಡಾ. ಪ್ರಕಾಶ ಬಡಿಗೇರ್ ಬಹಮನಿ ಸುಲ್ತಾನರ ಕೊಡುಗೆಗಳನ್ನು ಕುರಿತು ಉಪನ್ಯಾಸ ನೀಡಿದರು. ಡಾ. ಪದ್ಮಾವತಿಯವರು ಮಕ್ಕಳಿಂದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ನಡೆಸಿಕೊಟ್ಟರು.
ಡಾ. ಶಂಭುಲಿಂಗ ಎಸ್. ವಾಣಿ ಸಂಯೋಜಕರು, ಕಲಬುರಗಿ ಇನ್ಟ್ಯಾಕ್ ಅಧ್ಯಾಯ ಇವರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಇಂದು ನಾವು ಅಚರಿಸುತ್ತಿರುವ ‘ವಿಶ್ವಪ್ರವಾಸೋಧ್ಯಮ ದಿನಾಚರಣೆಗೆ ಸೂಕ್ತವಾಗಿರುವಂತಹ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಸ್ಮಾರಕಗಳು ನಮ್ಮ ಕಲಬುರಗಿಯಲ್ಲಿವೆ. ಅದರಲ್ಲಿ ಜಾಮಿಮಸೀದಿ ಮತ್ತು ಜಗತ್ತಿನ ಉದ್ದನೆಯ ತೋಪು. ಆದರೆ ಇವುಗಳ ನಿರ್ವಹಣೆ, ಪ್ರಚಾರ, ನಮ್ಮಿಂದ ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಸಮಾರೋಪ ಭಾಷಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ, ವಿದ್ಯಾರ್ಥಿನಿಯರು, ಇನ್ಟ್ಯಾಕ್ ಪದಾಧಿಕಾರಿಗಳು ಹಾಗೂ ಸ್ಥಳಿಯ ನಾಗರಿಕರು ಭಾಗವಹಿಸಿದರು. ಕೊನೆಯದಾಗಿ ವಿದ್ಯಾರ್ಥಿನಿಯರು ಕಾರ್ಯಕ್ರಮ ಕುರಿತು ಅನಿಸಿಕೆಯನ್ನು ಹೇಳುವುದರ ಮೂಲಕ ಮುಕ್ತಾಯಗೊಂಡಿತು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…