ವೈಜ್ಞಾನಿಕ ಮನೋಭಾವನೆಜತೆ ಸಂಸ್ಕಾರ ಬೆಳೆಸಿ

ಕಲಬುರಗಿ: ಪ್ರಶಿಕ್ಷಣಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದರ ಜೊತೆಗೆ ಸಂಸ್ಕಾರವನ್ನು ಕಲಿಸುವುದು ಶಿಕ್ಷಕರ ಜವಾಬ್ದಾರಿ ಎಂದು ದೇವಿಂದ್ರ ವಿಶ್ವಕರ್ಮ ಹೇಳಿದರು.

ಅವರು ಜೇವರ್ಗಿ ನಗರದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಿವಿಧ ಸಹಪಠ್ಯ ಚಟುವಟಿಕೆಗಳ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಸಹಪಠ್ಯ ಚಟುವಟಿಕೆಗಳಲ್ಲಿ ಹಲವು ವಿಧಗಳಿದ್ದು, ಸಹಪಠ್ಯ ಚಟುವಟಿಕೆಯಲ್ಲಿ ಕಲೆ, ಸಾಹಿತ್ಯ, ಜಾನಪದ ಕಲೆಗಳ ಅನಾವರಣದಿಂದ ವಿದ್ಯಾರ್ಥಿಗಳು ಸಾಂಸ್ಕøತಿಕವಾಗಿ ಮುಂದುವರೆಯುತ್ತಾರೆ.

ಸಹಪಠ್ಯ ಚಟುವಟಿಕೆಯಲ್ಲಿ ಕ್ರೀಡೆಯು ಬಹಳ ಮಹತ್ವದ್ದಾಗಿದ್ದು, ಮಕ್ಕಳ ದೈಹಿಕ ಮಾನಸಿಕ ಬೆಳೆವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮನಸ್ಸು ಮತ್ತು ದೇಹ ಸಧೃಢವಾಗಿರುತ್ತದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸುವುದು ಶಿಕ್ಷಕರ ಮತ್ತು ಪಾಲಕರ ಕರ್ತವ್ಯವಾಗಿದೆ. ಮಕ್ಕಳಲ್ಲಿ ಸ್ಪರ್ಧಾ ಮನೋಭವನೆ ಬೆಳೆಯಬೇಕಾದರೆ ಮೊದಲು ಶಿಕ್ಷಕರು ವಿವಿಧ ಸಹಪಠ್ಯಗಳಲ್ಲಿ ಭಾಗವಹಿಸಬೇಕು.

ಕಲೆ, ಸಂಸ್ಕøತಿ, ಕ್ರೀಡೆ, ಎನ್‍ಸಿಸಿ ಹಾಗೂ ಎನ್‍ಎಸ್‍ಎಸ್ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸದಾ ತಮ್ಮನ್ನು ತಾವೇ ತೊಡಗಿಸಿಕೊಂಡಾಗ ಮಾತ್ರ ವಿದ್ಯಾರ್ಥಿ ಜೀವನ ಪರಿಪೂರ್ಣವಾಗುತ್ತದೆ. ಶಿಕ್ಷಕರ ಮಾತುಗಳನ್ನು ಪ್ರಶಿಕ್ಷಣಾರ್ಥಿಗಳು ತಪ್ಪದೇ ಪಾಲಿಸಬೇಕು. ಸಮಾಜ ಸುಧಾರಣೆಗೆ ಗುರು, ತಾಯಿ ಮತ್ತು ತಂದೆ ಪಾತ್ರ ಪ್ರಮುಖ. ಮನೆಯಲ್ಲಿ ಪಾಲಕರು, ಶಾಲೆಯಲ್ಲಿ ಗುರುಗಳು ಮಕ್ಕಳಿಗೆ ಉತ್ತಮ ಸಂಸ್ಕಾರವೆಂಬ ಬೀಜ ಬಿತ್ತಬೇಕು. ಮುಂದೆ ಹೆಮ್ಮರವಾಗಿ ಸಮಾಜಕ್ಕೆ ನೆರಳು ನೀಡುತ್ತದೆ. ಸಂಸ್ಕಾರಯುತ ಶಿಕ್ಷಣ ಇಂದು ಅಗತ್ಯವಾಗಿದೆ ಎಂದು ಶಿಕ್ಷಣತಜ್ಞ ದೇವಿಂದ್ರ ವಿಶ್ವಕರ್ಮ ಹೇಳಿದರು.

ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಾದ ಐಶು ಎಮ್, ಶಿವಾನಿ, ಐಶ್ವರ್ಯ, ತಾಯಮ್ಮ, ಶರಣಮ್ಮ, ಮೆಹಜಬಿನ್, ರೇಷ್ಮಾ, ರೇಣುಕಾ, ಭಾಗ್ಯಶ್ರೀ ಪಾಟೀಲ್, ಭವಾನಿ ಮಾಲಿಪಾಟೀಲ್, ಅಂಬಿಕಾ, ಶಾಹೀನ್, ಸುಧಾ, ಸವಿತಾ ಎಮ್, ರಾಜಶ್ರೀ ಬಿರಾದಾರ, ಲಕ್ಷ್ಮೀ, ಮೋನಿಕಾ, ದಾನೇಶ್ವರಿ, ಬಸಮ್ಮಾ ಆರ್, ದಾನಮ್ಮ, ರೂಪಾ, ಪೂಜಾ ಎಸ್ ನಂದಿ, ಜ್ಯೋತಿ ಎಮ್, ಕುಶಾಲ್, ಸಕ್ಕರೆಪ್ಪ, ರಿಯಾಜ್, ಸುರೇಶ್, ಇಸ್ಮಾಯಿಲ್, ಶಿವರಾಜ್ ಮಹಾಂತೇಶ ಸೇರಿ ಮುಂತಾದವರು ಹಾಜರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420