ಕಲಬುರಗಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಈ ಬಾರಿ ಪ್ರಕಾಶಕರನ್ನೂ ಪರಿಗಣಿಸಿದ್ದಕ್ಕೆ ಕಲಬುರಗಿಯ ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನದ ರೂವಾರಿ ಬಸವರಾಜ ಕೊನೇಕ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರನ್ನು ಅಭಿನಂದಿಸಿದ್ದಾರೆ.
ಸಚಿವ ತಂಗಡಗಿ ಅವರು, ಕರ್ನಾಟಕ ನಾಮಕರಣಕ್ಕೆ ಐವತ್ತು ವರ್ಷಗಳು ತುಂಬಿದ ಸುವರ್ಣ ಸಂಭ್ರಮಕ್ಕಾಗಿ ರಾಜ್ಯದ ನಾಲ್ಕೂ ವಿಭಾಗಗಳಲ್ಲಿ ಸಾಹಿತಿ, ಕಲಾವಿದರ ಸಭೆ ಆಯೋಜಿಸಿ, ಸಲಹೆಗಳನ್ನು ಸ್ವೀಕರಿಸಿದ್ದರು.
ಅದರಂತೆ ಕಲಬುರಗಿಯಲ್ಲಿ ಜರುಗಿದ ಸಭೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಪುಸ್ತಕ ಪ್ರಕಾಶಕರನ್ನೂ ಪರಿಗಣಿಸಬೇಕು ಎಂದು ಬಸವರಾಜ ಕೊನೇಕ ಒತ್ತಾಯಿಸಿದ್ದರು. ಅದಕ್ಕೆ ಸ್ಪಂದಿಸಿದ ಸಚಿವರು, ಬಳ್ಳಾರಿಯ ಲೋಹಿಯಾ ಪ್ರಕಾಶನದ ಚೆನ್ನ ಬಸವಣ್ಣನವರನ್ನು ಆಯ್ಕೆ ಸಮಿತಿ ಸದಸ್ಯರನ್ನಾಗಿಸಿದ್ದು ಸಂತೋಷ ತಂದಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಸಾಂಸ್ಕೃತಿಕ ಇತಿಹಾಸದಲ್ಲಿ ಸಚಿವರೊಬ್ಬರು ರಾಜ್ಯದ ಸಾಹಿತಿ ಕಲಾವಿದರ ಸಭೆ ಕರೆದು ಸಲಹೆಗಳನ್ನು ಸ್ವೀಕರಿಸಿದ್ದು ಇದೇ ಮೊದಲು. ಇದಕ್ಕೆ ಕಾರಣರಾದ ಸಚಿವ ತಂಗಡಗಿ ಯವರ ಈ ನಡೆ ಮಾದರಿಯಾಗಿದೆ ಎಂದು ಕೊನೇಕ ತಿಳಿಸಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…