ಸುರಪುರ: ಮಹಾತ್ಮ ಗಾಂಧಿ ಶಾಸ್ತ್ರಿಜಿ ಜಯಂತಿ: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

0
10

ಸುರಪುರ: ತಾಲೂಕು ಆಡಳಿತ ದಿಂದ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಜಯಂತಿ ಆಚರಿಸಲಾಯಿತು.ತಹಸೀಲ್ದಾರ್ ವಿಜಯಕುಮಾರ ಕೆ ಇಬ್ಬರು ಮಹಾನಾಯಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ವಂದಿಸಿದರು.

ನಂತರ ತಾಲೂಕು ಪಂಚಾಯತಿ ಕಾರ್ಯಾಲಯದ ಆವರಣದಲ್ಲಿ ಇಬ್ಬರು ಮಹನಿಯರ ಜಯಂತಿ ಅಂಗವಾಗಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿಜಯಕುಮಾರ ಕೆ ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್ ನೇತೃತ್ವದಲ್ಲಿ ಕಚೇರಿ ಆವರಣದಲ್ಲಿ ಇಬ್ಬರು ಅಧಿಕಾರಿಗಳು ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ ನಡೆಸಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕಚೇರಿಯ ಗುರುಬಸಪ್ಪ ಪಾಟೀಲ್,ಅಶೋಕ ಇಎಲ್‍ಸಿ,ಬಸವರಾಜ ಬಿರಾದಾರ,ಪ್ರವೀಣ ಕುಮಾರ,ರವಿ ನಾಯಕ,ಭೀಮು ಯಾದವ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here