ಶಹಾಬಾದ:ನಗರಸಭೆಯ ಪೌರಾಯುಕ್ತೆ ಪಂಕಜಾ ರಾವೂರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ವಾಣಿಜ್ಯ ಉದ್ದಿಮೆ ಪರವಾನಗಿ, ಆಸ್ತಿ ತೆರಿಗೆ, ನೀರಿನ ಕರ ಪಾವತಿಸದ ಸಾರ್ವಜನಿಕರ ಮನೆಮನೆಗೆ ತೆರಳಿ ತೆರಿಗೆ ವಸೂಲಾತಿ ಹಾಗೂ ತೆರಿಗೆ ನಿಗದಿತ ಸಮಯದೊಳಗೆ ಪಾವತಿಸುವಂತೆ ಮನವಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ: ನಗರಸಭೆಯ ಪೌರಾಯುಕ್ತೆ ಪಂಕಜಾ ರಾವೂರ ಅವರು, ಈಗಾಗಲೇ ಬಾಕಿ ಹಾಗೂ ಚಾಲ್ತಿ ತೆರಿಗೆಯನ್ನು ಸಾಕಷ್ಟು ಜನರು ಪಾವತಿಸದ ಕಾರಣ ನಗರಸಭೆ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಸ್ವಯಂಪ್ರೇರಿತರಾಗಿ ಸಾರ್ವಜನಿಕರು ವಾಣಿಜ್ಯ ಉದ್ದಿಮೆ ಪರವಾನಗಿ, ಆಸ್ತಿ ತೆರಿಗೆ, ನೀರಿನ ಕರ ಪಾವತಿ ಮಾಡುವುದು ಅವರ ಆದ್ಯ ಕರ್ತವ್ಯ.ಆದರೆ ಕರಪಾವತಿ ಮಾಡಲು ಮುಂದಾಗುತ್ತಿಲ್ಲ.ಈಗಾಗಲೇ ಅನೇಕ ಬಾರಿ ಕರ ಪಾವತಿಸುವಂತೆ ಮನವಿ ಮಾಡಲಾಗಿದೆ. ತೆರಿಗೆ ಸಂಗ್ರಹವಾದರೆ ಮಾತ್ರ ನಗರದ ಅಭಿವೃದ್ಧಿ ಮಾಡಲು ಸಾಧ್ಯ.ಅಲ್ಲದೇ ಸಿಬ್ಬಂದಿಗಳ ವೇತನ ನೀಡಲು ಸಾಧ್ಯವಾಗುತ್ತದೆ. ನಗರದ ಅಭಿವೃದ್ಧಿ ದೃಷ್ಟಿಯಿಂದ ಸಾರ್ವಜನಿಕರು ಸಹಕರಿಸಿ, ತೆರಿಗೆ ಪಾವತಿ ಮಾಡಿ.ಇಲ್ಲವಾದಲ್ಲಿ ದಂಡ ವಿಧಿಸಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ನಗರಸಭೆಯ ಎಇಇ ಶರಣು ಪೂಜಾರಿ, ಪರಿಸರ ಎಇಇ ಅಭಯಕುಮಾರ, ವ್ಯವಸ್ಥಾಪಕ ಶರಣಗೌಡ ಪಾಟೀಲ, ಜೆಇಗಳಾದ ರಬ್ಬಾನಿ, ಸಿದ್ದಪ್ಪ ಸೋಮಪೂರೆ, ಕಂದಾಯ ನಿರೀಕ್ಷಕ ಸುರೇಶ, ಸಮುದಾಯ ಸಂಘಟನಾಧಿಕಾರಿ ರಘುನಾಥ ನರಸಾಳೆ, ನಾರಾಯಣ ರೆಡ್ಡಿ, ಆರೋಗ್ಯ ನಿರಕ್ಷಕರಾದ ಶಿವರಾಜಕುಮಾರ.ಮಹ್ಮದ್ ಮೈಹಿನೋದ್ದಿನ್, ಶಿವಾನಂದ ದ್ಯಾಮಗೊಂಡ, ಕರ ವಸೂಲಿಗಾರರು ಸೇರಿದಂತೆ ಸಿಬ್ಬಂದಿಗಳು ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…