ಸುರಪುರ: ಶ್ರೀ ಯೋಗಿಶ್ವರ ಯಾಜ್ಞವಲ್ಕ್ಯ ಸಂಘದ ವತಿಯಿಂದ ನಗರದ ಪ್ರಸನ್ನ ವೆಂಕಟರಮಣ ದೇವಸ್ಥಾನದಲ್ಲಿ ವಿಠಲ್ ಕೃಷ್ಣ ಜಯಂತಿಯನ್ನು ಶುಕ್ರವಾರ ಹಾಗೂ ಶನಿವಾರಗಳಂದು ಭಕ್ತಿ-ಶ್ರದ್ಧೆಗಳಿಂದ ಆಚರಿಸಲಾಯಿತು, ನಿಮಿತ್ತವಾಗಿ ಸಾಯಂಕಾಲ ದೇವಸ್ಥಾನದಲ್ಲಿ ಮಕ್ಕಳಿಂದ ಕೃಷ್ಣ ವೇಷಧಾರಿಗಳ ಪ್ರದರ್ಶನ, ನೃತ್ಯ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು, ನಂತರ ವೇಣುಗೋಪಾಲ ಮಹಿಳಾ ಭಜನಾ ಮಂಡಳಿ ಯಿಂದ ದಾಸ ಸಾಹಿತ್ಯದ ಅಂತ್ಯಾಕ್ಷರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು, ನಂತರ ಭಜನೆ ಹಾಗೂ ಹರಿವಾಣ ಸೇವೆ ನಡೆಯಿತು, ಶನಿವಾರದಂದು ಬೆಳಿಗ್ಗೆ ಪಾರಣಿ ಕಾರ್ಯಕ್ರಮ ಜರುಗಿತು, ಭಕ್ತಾದಿಗಳಿಗೆ ತೀರ್ಥ, ಪ್ರಸಾದ ಜರುಗಿತು.
ಸಮಿತಿಯ ಹಿರಿಯರಾದ ಅಶೋಕ ಕುಲಕರ್ಣಿ ಹೆಮನೂರು, ಮಲ್ಲಾರಾವ ಕುಲಕರ್ಣಿ ಸಿಂದಗೇರಿ, ರಾಘವೇಂದ್ರಾಚಾರ್ಯ ಹಳ್ಳದ, ಮಲ್ಲಾಚಾರ್ಯ ಜೋಷಿ ಕುರಿಹಾಳ, ಕೃಷ್ಟಾಚಾರ್ಯ ದೇವರು, ಲಕ್ಷ್ಮೀಕಾಂತ ಕುಲಕರ್ಣಿ ಅಮ್ಮಾಪುರ, ಭೀಮಶೇನಾಚಾರ್ಯ ಜೋಷಿ ಮಂಗಳೂರು, ಚಂದ್ರಕಾಂತ ನಾಡಗೌಡ, ಮಲ್ಲಾರಾವ ಪಟವಾರಿ, ಶ್ರೀನಾಥ ಸಿಂದಗೇರಿ, ರಾಘವೇಂದ್ರ ಕುಲಕರ್ಣಿ ಗೆದ್ದಲಮರಿ, ವೆಂಕಟೇಶ ಕುರಿಹಾಳ, ಪ್ರವೀಣ ಕುಲಕರ್ಣಿ, ಶ್ರೀನಿವಾಸ ದೇವಡಿ, ಗುಂಡೂರಾವ ಕುಲಕರ್ಣಿ ಅರಳಹಳ್ಳಿ ಹಾಗೂ ಮಹಿಳೆಯರು, ಮಕ್ಕಳು ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…