CUK: ಮುಖ್ಯ ಪರೀಕ್ಷೆಗಳಿಗೆ ಮೂರು ದಿನಗಳ ತರಬೇತಿ ಕಾರ್ಯಗಾರ

ಕಲಬುರಗಿ; “ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನ್ಯಾಯಾಂಗ ಪರೀಕ್ಷೆಯ ತಯಾರಿಗಾಗಿ ಕ್ರಿಯಾ ಯೋಜನೆ ಬಹಳ ಮುಖ್ಯ” ಎಂದು ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ನಾಗಶ್ರೀ, ಹೇಳಿದರು. ಅವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕಾನೂನು ವಿಭಾಗ ಮತ್ತು ಅಧಿವಕ್ತ ಪರಿಷತ್ ಕರ್ನಾಟಕ ಉತ್ತರ (ಕಲಬುರಗಿ ಘಟಕ) ಜಂಟಿಯಾಗಿ ಆಯೋಜಿಸಿದ್ದ ಸಿವಿಲ್ ನ್ಯಾಯಾಧೀಶರ ಮುಖ್ಯ ಪರೀಕ್ಷೆಗಳ ಮೂರು ದಿನಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಅವರು ಮುಂದುವರೆದು ಮಾತನಾಡಿ “ಯೋಜನಾಬದ್ದ ಸಿದ್ಧತೆಯು ಯಶಸ್ಸಿಗೆ ಕಾರಣವಾಗುತ್ತದೆ. ಆಕಾಂಕ್ಷಿಗಳು ಕೇವಲ ಪರೀಕ್ಷೆ ಪಾಸಾಗುವುದನ್ನು ಗಮನದಲ್ಲಿಟ್ಟುಕೊಂಡು ಅಧ್ಯಯನ ಮಾಡಬಾರದು. ಬದಲಿಗೆ ಜ್ಞಾನವನ್ನು ಪಡೆಯಲು ಅಧ್ಯಯನ ಮಾಡಬೇಕು. ನೀವು ಕೇವಲ ಉತ್ತೀರ್ಣಕ್ಕೆ ಸಾಕಾಗುವಷ್ಟು ಅಂಕಗಳಿಸುವ ಉದ್ದೇಶ ಹೊಂದಿರಬಾರದು. ಬದಲಿಗೆ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆಯುವ ಗುರಿಯನ್ನು ಹೊಂದಿರಬೇಕು.” ಎಂದು ಹೇಳಿದರು.

ಗೌರವಾನ್ವಿತ ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ಅವರು ತಮ್ಮ ಅಧ್ಯಕ್ಷೀಯ ನುಡಿಗಳನ್ನಾಡಿ “ಸಮಾಜವನ್ನು ಸುಸ್ಥಿತಿಯಲ್ಲಿಡುವಲ್ಲಿ ನ್ಯಾಯಾಂಗದ ಪಾತ್ರ ಬಹಳ ಮುಖ್ಯವಾಗಿದೆ. ಪ್ರಸ್ತುತ ದಿನಗಳಲ್ಲಿ ಎಲ್ಲ ಸಂಸ್ಥೆಗಳ ಗುಣಮಟ್ಟ ಹದಗೆಡುತ್ತಿದೆ. ವ್ಯವಸ್ಥೆಯನ್ನು ಕಾಪಾಡುವುದು ನ್ಯಾಯಾಂಗದಿಂದ ಮಾತ್ರ ಸಾಧ್ಯ. ನ್ಯಾಯಾಂಗ, ಶಿಕ್ಷಣ ಸಂಸ್ಥೆಗಳು ಮತ್ತು ವೈದ್ಯರು ನಿರ್ಭಯವಾಗಿ ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡಿದಾಗ ಮಾತ್ರ ದೇಶ ನಿಜವಾದ ಅಭಿವೃದ್ಧಿ ಕಾಣಲು ಸಾಧ್ಯ. ಅವರು ಯಾವುದೇ ಬಾಹ್ಯ ಒತ್ತಡಕ್ಕೆ ಮಣಿಯಬಾರದು. ಕಾನೂನು ಕ್ಷೇತ್ರದಲ್ಲಿ ಯಶಸ್ಸು ಕೇವಲ ಜ್ಞಾನದ ಮೇಲೆ ಅವಲಂಬಿತವಾಗಿರದೆ ಕಾನೂನುಗಳನ್ನು ಹೇಗೆ ಅರ್ಥೈಸಬೇಕು ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಕಾನೂನು ಕ್ಷೇತ್ರದಲ್ಲಿ ವ್ಯಾಖ್ಯಾನ ಬಹಳ ಮುಖ್ಯ.” ಎಂದರು.

ಕಾರ್ಯಕ್ರಮ ಆಯೋಜನೆಯಬಗ್ಗೆ ತಮ್ಮ ಸಂತೋಷ ವ್ಯಕ್ತ ಪಡಿಸಿದ ಕುಲಪತಿಗಳು “ಅವರ ಪ್ರಯತ್ನಕ್ಕಾಗಿ ನಾನು ಸಂಘಟಕರನ್ನು ಅಭಿನಂದಿಸುತ್ತೇನೆ. ಈ ವಿಷಯದ ಕುರಿತು ಒಂದು ತಿಂಗಳ ಕಾರ್ಯಕ್ರಮವನ್ನು ಆಯೋಜಿಸಲು ನಾನು ಅವರಿಗೆ ಸಲಹೆ ನೀಡುತ್ತೇನೆ ಮತ್ತು ವಿಶ್ವವಿದ್ಯಾಲಯದ ಆಡಳಿತವು ಅಗತ್ಯವಾದ ಬೆಂಬಲವನ್ನು ನೀqಲಿದೆ” ಎಂದು ಅವರು ಹೇಳಿದರು.

ಸಿಯುಕೆಯ ಕಾನೂನು ಮತ್ತು ನ್ಯಾಯಶಾಸ್ತ್ರ ಅಧ್ಯಯನ ನಿಕಾಯದ ಡೀನ್ ಡಾ.ಬಸವರಾಜ ಎಂ.ಕುಬಕಡ್ಡಿ ಅತಿಥಿಗಳನ್ನು ಸ್ವಾಗತಿಸಿ, ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಹಾರೈಸಿದರು. ಕಡ್ಲೂರು ಸತ್ಯನಾರಾಯಣ ಆಚಾರ್, ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ರಾಜ್ಯ ಗೌರವಾಧ್ಯಕ್ಷರು, ಆದಿವಕ್ತ ಪರಿಷತ್, ಕರ್ನಾಟಕ ಉತ್ತರ, ಕಲಬುರಗಿಯ ವಕೀಲರ ಸಂಘದ ಕಾರ್ಯದರ್ಶಿ ಬಸವರಾಜ ನಾಶಿ, ನ್ಯಾಯಾಂಗ ತರಬೇತಿ ಪರೀಕ್ಷೆ ರಾಜ್ಯ ಸಂಚಾಲಕ ರಾಕೇಶ ಪಂಘಂಟಿ, ಅಧಿವಕ್ತ ಪರಿಷತ್ ಕರ್ನಾಟಕ ಉತ್ತರ ಉಪಸ್ಥಿತರಿದ್ದರು. ಇಂದೂದರ್ ಜಾಧವ್ ಕಾರ್ಯಕ್ರಮ ನಿರೂಪಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420