ಶಹಾಬಾದ: ನಗರದಿಂದ ಹೊರಡುವ ಜೇವರ್ಗಿ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹಾಳಾಗಿದ್ದು ಕೂಡಲೇ ರಸ್ತೆಯನ್ನು ಮರು ಡಾಂಬರೀಕರಣ ಮಾಡಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಎಸ್ಡಿಪಿಐ ಪಕ್ಷದ ಮುಖಂಡರು ತಹಸೀಲ್ದಾರ ಗುರುರಾಜ ಸಂಗಾವಿ ಅವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ನಗರದ ಕನಕದಾಸ ವೃತ್ತದಿಂದ ಜೇವರ್ಗಿ ಹೊರಡುವ ಮಾರ್ಗ ಮಧ್ಯದ ಫಿರೋಜಾಬಾದ ವೃತ್ತದವರೆಗಿನ ರಸ್ತೆಯಲ್ಲಿ ಕಂದಕಗಳು ಬಿದ್ದಿವೆ. ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.ಸುಮಾರು ಐದಾರು ವರ್ಷಗಳಿಂದ ವರ್ಷಗಳಿಂದ ರಸ್ತೆ ದುರಸ್ತಿಗೊಳ್ಳದ ಕಾರಣ ರಸ್ತೆ ತುಂಬಾ ಹದಗೆಟ್ಟಿದೆ. ಅಲ್ಲದೇ ಗುತ್ತಿದಾರರ ಕಳಪೆ ಮಟ್ಟದಿಂದ ಮಾರ್ಗ ಮಧ್ಯೆ ರಸ್ತೆ ನಿರ್ಮಾಣವಾಗುವ ಮೊದಲೇ ಹಾಳಾಗಿ ಹೋಗಿವೆ.ಆದ್ದರಿಂದ ಹದಗೆಟ್ಟಿರುವ ರಸ್ತೆ ಶೀಘ್ರ ಡಾಂಬರೀಕರಣ ಮಾಡಬೇಕು.ಅಲ್ಲದೇ ಬಸ್ ಸಂಚಾರವಿಲ್ಲದೇ ಸಾರ್ವಜನಿಕರಿಗೆ ಎಲ್ಲಿಲ್ಲದ ತೊಂದರೆಯಾಗುತ್ತಿದೆ.ಅದರಲ್ಲೂ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ನೌಕರಸ್ಥರಿಗೆ ತುಂಬಾ ಸಂಕಟವಾಗುತ್ತಿದ್ದು ಕೂಡಲೇ ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿ, ಬಸ್ ಸೇವೆ ಪ್ರಾರಂಭ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಎಸ್ಡಿಪಿಐ ಪಕ್ಷದ ಅಧ್ಯಕ್ಷ ಮಹ್ಮದ್ ಯುನೂಸ್,ದಾವೂದ್ ಹಳ್ಳಿ,ಮಹ್ಮದ್ ಹಬೀಬ್,ಶೇಖ ಸರಫರಾಜ್,ಅರೀಫ್ ಇಕ್ಬಾಲ್,ಅನ್ವರ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…