ಶಹಾಬಾದ: ರಾಜ್ಯದಲ್ಲಿ ಹೊಸ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡಲು ಮುಂದಾಗಿರುವ ಸರಕಾರದ ನಿರ್ಧಾರಕ್ಕೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಅಧ್ಯಕ್ಷ ಜಗನ್ನಾಥ ಎಸ್.ಎಚ್. ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ 389 ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ನೀಡಲು ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದಕ್ಕೆ ಖಂಡಿಸುತ್ತೇವೆ. 3000 ಜನಸಂಖ್ಯೆಯ ಗ್ರಾಪಂಗಳಲ್ಲಿ ಮದ್ಯದ ಅಂಗಡಿಗಳಿಗೆ ಅನುಮತಿ ನೀಡಲು ಪ್ರಸ್ತಾವನೆ ಸಲ್ಲಿಸಿದೆ. ಅದೇ ರೀತಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ಕೂಡ ಮಧ್ಯದ ಅಂಗಡಿಗಳನ್ನು ತೆರೆಯುವ ಉದ್ದೇಶ ಹೊಂದಿದೆ.ರಾಜ್ಯ ಸರಕಾರ ಏನು ಮಾಡಲು ಹೊರಟಿದೆ ತಿಳಿಯುತ್ತಿಲ್ಲ.
ಮದ್ಯದ ಅಂಗಡಿಗಳು ಸಾಕಷ್ಟು ಪ್ರಮಾಣದಲ್ಲಿವೆ.ಅನಧಿಕೃತವಾಗಿ ಸಾಕಷ್ಟು ನಡೆಯುತ್ತಿವೆ.ಇದರಿಂದಲೇ ಸಾಕಷ್ಟು ತೊಂದರೆ ಸಾರ್ವಜನಿಕರು ಅನುಭವಿಸುತ್ತಿದ್ದಾರೆ.ಮಹಿಳೆಯರು ಇದನ್ನು ವ್ಯಾಪಕವಾಗಿ ಖಂಡಿಸುತ್ತಿದ್ದಾರೆ.ಗಾಂಧೀಜಿಯವರ ಮಧ್ಯ ಮುಕ್ತ ಭಾರತದ ಕನಸು ಏನಾಯಿತು ಎಂಬುದು ಸರಕಾರ ತಿಳಿಸಬೇಕಿದೆ. ಇದು ಅತ್ಯಂತ ಜನವಿರೋಧಿ ಕ್ರಮವಾಗಿದ್ದು, ಕೂಡಲೇ ಈ ಪ್ರಸ್ತಾವನೆ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…