ಕಲಬುರಗಿ: ಜಗತ್ತಿನ ಪ್ರತಿಷ್ಠಿತ ಅಮೆರಿಕ ದೇಶದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯವು ವಾರ್ಷಿಕವಾಗಿ ಪ್ರಕಟಿಸುವ ವಿಶ್ವದ ಅತ್ಯುತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಕರು ಹಾಗೂ ಖ್ಯಾತ ವಿಜ್ಞಾನಿಗಳಾದ ಪ್ರೊ. ಜೆ. ಸಿ. ಉಮಾವತಿ ಮತ್ತು ಪ್ರೊ. ಸಿ. ಸುಲೋಚನಾ ಇವರುಗಳು ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು ಹಾಗೂ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ವೆಬ್ ಆಫ್ ಸೈನ್ಸ್, ಸ್ಕೋಪಸ್, ಗೂಗಲ್ ಸ್ಕಾಲರ್, ಹೆಚ್ ಇಂಡೆಕ್ಸ್, ಇಂಪ್ಯಾಕ್ಟ್ ಪ್ಯಾಕ್ಟರ್ ಹಾಗೂ ಸೈಟೇಶನ್ ಹೀಗೆ ಹಲವಾರು ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಶೇ.2ರಷ್ಟು ಅತ್ಯುತ್ತಮ ಸಂಶೊಧಕರನ್ನು ಗುರುತಿಸಿ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯವು ವಾರ್ಷಿಕವಾಗಿ ಖ್ಯಾತ ವಿಜ್ಞಾನಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಜ್ಞಾನ ಕ್ಷೇತ್ರದಲ್ಲಿ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಲು ಹೆಸರುವಾಸಿಯಾಗಿರುವ ಎಲ್ಸಿವೆಯರ್ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಪಟ್ಟಿಯನ್ನು ಸಿದ್ಧಪಡಿಸಿದೆ.
ಜಾಗತಿಕ ಮಟ್ಟದ ವಿಜ್ಞಾನಿಗಳ ಪಟ್ಟಿಯಲ್ಲಿ ಹೆಸರು ಪಡೆದಿರುವ ಇಬ್ಬರು ವಿಜ್ಞಾನಿಗಳ ಸಾಧನೆಗೆ ಗೌರವಾನ್ವಿತ ಕುಲಪತಿಗಳಾದ ಪ್ರೊ. ದಯಾನಂದ ಅಗಸರ್, ಕುಲಸಚಿವರಾದ ಡಾ. ಬಿ. ಶರಣಪ್ಪ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಜ್ಯೋತಿ ಧಮ್ಮ ಪ್ರಕಾಶ್, ವಿತ್ತಾಧಿಕಾರಿಗಳಾದ ಪ್ರೊ. ರಾಜನಾಳ್ಕರ ಲಕ್ಷ್ಮಣ, ವಿಜ್ಞಾನ ತಂತ್ರಜ್ಞಾನ ನಿಕಾಯದ ಡೀನರಾದ ಪ್ರೊ. ಕೆ. ಲಿಂಗಪ್ಪ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
“ವಿಜ್ಞಾನ ಕ್ಷೇತ್ರದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಇಬ್ಬರು ಪ್ರಾಧ್ಯಾಪಕರು ಹಾಗೂ ಖ್ಯಾತ ವಿಜ್ಞಾನಿಗಳಾದ ಪ್ರೊ. ಜೆ. ಸಿ. ಉಮಾವತಿ ಮತ್ತು ಪ್ರೊ. ಸಿ. ಸುಲೋಚನಾ ಇವರು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಗುಣಮಟ್ಟದ ಸಂಶೋಧನೆ ಮತ್ತು ಪ್ರಕಟಣೆಯಿಂದ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಹೆಮ್ಮೆ ಸಂಗತಿ. ಈ ಇಬ್ಬರು ವಿಜ್ಞಾನಿಗಳ ಸಾಧನೆಯಿಂದ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಕೀರ್ತಿ ಬಂದಿದೆ. ಇಂತಹ ವಿಜ್ಞಾನಿಗಳು ನಮ್ಮ ವಿವಿಯಲ್ಲಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ. ಇವರಿಂದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಮಾರ್ಗದರ್ಶನ ಮತ್ತು ಪ್ರೇರಣೆ ಸಿಗಲಿದೆ. ವಿಶ್ವವಿದ್ಯಾಲಯದ ಪರವಾಗಿ ಇಬ್ಬರು ವಿಜ್ಞಾನಿಗಳಿಗೆ ಅಭಿನಂದನೆಗಳು. -ಪ್ರೊ. ದಯಾನಂದ ಅಗಸರ, ಕುಲಪತಿಗಳು, ಗುಲಬರ್ಗಾ ವಿಶ್ವವಿದ್ಯಾಲಯ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…