ಕಲಬುರಗಿ: ಅಂತ್ಯೋದಯ ಅನ್ನ ಯೋಜನೆ ಆದ್ಯತಾ ಪಡಿತರ ಚೀಟಿದಾರರು ಮತ್ತು ಕಲ್ಯಾಣ ಸಂಸ್ಥೆಗಳಿಗೆ ಹೆಚ್ಚುವರಿ ಅಕ್ಕಿ ಸರಬರಾಜಿಗೆ ರಾಜ್ಯ ಸರ್ಕಾರ ಮುಕ್ತ ಟೆಂಡರ್ ಕರೆಯದೇ, ಕೇಂದ್ರದ ಸಂಸ್ಥೆಗಳಿಂದ ಅಕ್ಕಿ ಖರೀದಿಸಿ ಅಕ್ರಮ ಎಸಗಲಾಗಿದೆ’ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಸಾರವಾಡ ಆರೋಪಿಸಿದ್ದಾರೆ.
ಪ್ರತಿ ಕೆ.ಜಿಗೆ ₹34.60ರಂತೆ ಕೇಂದ್ರ ಸರ್ಕಾರದ ಸಂಸ್ಥೆಗಳಾದ ಕೇಂದ್ರೀಯ ಬಂಡಾರ, ಎನ್ಸಿಸಿಎಫ್ನಿಂದ ಸರ್ಕಾರ 40 ಸಾವಿರ ಮೆಟ್ರಿಕ್ ಟನ್ ಅಕ್ಕಿ ಖರೀದಿಸಲು ಮುಂದಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಕ್ತ ಟೆಂಡರ್ ಕರೆದರೆ ಹಲವಾರು ಸಂಸ್ಥೆಗಳು ಟೆಂಡರ್ನಲ್ಲಿ ಭಾಗವಹಿಸುವ ಮೂಲಕ ಗುಣಮಟ್ಟದ ಅಕ್ಕಿ ಜನರಿಗೆ ದೊರಕುತ್ತಿತ್ತು. ಪ್ರಧಾನ ಮಂತ್ರಿ ಪೆÇೀಷಣಾ ಅಭಿಯಾನ ಯೋಜನೆ ಅಡಿಯ ಫಲಾನುಭವಿಗಳಿಗೆ ವಿತರಣೆ ಮಾಡಲು ಪ್ರತಿ ಕೆ.ಜಿಗೆ ₹29 ರಂತೆ ಅದೇ ಸಂಸ್ಥೆ ವಿತರಣೆ ಮಾಡಿದೆ. ಇದು ನೋಡಿದರೆ ಅಕ್ರಮ ಎಸಗಿರುವುದು ಕಂಡು ಬರುತ್ತದೆ’ ಎಂದರು.
ಕೂಡಲೇ ಈ ಆದೇಶವನ್ನು ರದ್ದುಪಡಿಸಿ ಸರ್ಕಾರ ಬೊಕ್ಕಸಕ್ಕೆ ಆಗುವ ನಷ್ಟವನ್ನು ತಪ್ಪಿಸಬೇಕು. ಗುಣಮಟ್ಟದ ಅಕ್ಕಿ ಪೂರೈಸಬೇಕು. ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಿದ್ಧಲಿಂಗ ರಾಠೋಡ, ಸಂಭಾಜಿ ಪಿಸೇ, ರಾಜು ಕುಂಬಾರ್ ಇದ್ದರು.
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…
ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…
ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…