ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು

ಕಲಬುರಗಿ: ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಈ ವರ್ಷದ ವಿಷಯ “ವಿದ್ಯಾರ್ಥಿ ಯುವ ಜನರ ದೃಷ್ಟಿ ಗ್ರಾಮ ಭಾರತದಲ್ಲಿ ಸರ್ವೋದಯದ ಸೃಷ್ಟಿ” ಶಿರ್ಷಿಕೆಯಡಿಯಲಿ ಹಮ್ಮಿಕೊಳ್ಳಲಾಗಿದೆ, ಕಲಬುರಗಿ ಜಿಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ಉಪ ನಿರ್ದೇಶಕರಾದ ಶಿವಶರಣಪ್ಪಾ ಮೂಳೆಗಾಂವ ಉದ್ಘಾಟಿಸಿ ಮಾತನಾಡುತ್ತಾ ಒಬ್ಬೊಬ್ಬರ ದೃಷ್ಟಿಕೊನ ಬೇರೆ ಬೇರೆಯಾಗಿರುತ್ತದೆ.

ಒಂದು ವಿಷಯದ ಸತ್ಯವನ್ನು ಅರಿತುಕೊಳ್ಳಬೇಕಾದರೆ ವಿದ್ಯಾರ್ಥಿಗಳು ಸೇವಾ ಮನೋಭಾವನೆಯ ಜೊತೆಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಅನ್ಯಾಯದ ವಿರುದ್ಧ ಪ್ರತಿಭಟಿಸುವ ಮನೋಭಾವ ಬೇಳಿಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಡಾ. ಶರಣಗೌಡ ಪಾಟೀಲ ಸರ್ ಅವರು ಮಾತನಾಡುತ್ತಾ ಏಳು ದಿವಸಗಳ ಈ ಶಿಬಿರದ ಸದುಪಯೋಗಪಡಿಸಿಕೊಳ್ಳಬೇಕು, ಹಲವಾರು ಹೊಸ ವಿಷಯಗಳು ನಿಮ್ಮ ಸಂಗಡಿಗರೊಂದಿಗೆ ಕಲಿತುಕೊಳ್ಳುವ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಈ ಶಿಬಿರ ನಿಮಗೆ ಅವಕಾಶಮಾಡಿಕೊಡುತ್ತದೆ ಎಂದು ಹೇಳಿದರು.

ಎನ್.ಎನ್.ಎಸ್. ಯೋಜನಾಧಿಕಾರಿಗಳಾದ ಶ್ರೀದೇವಿ ಬಾವಿದೊಡ್ಡಿ, ಶಿಬಿರದ ಗುರಿ-ಉದ್ದೇಶಗಳನ್ನು ತಿಳಿಸುತ್ತಾ ಈ ಶಿಬಿರಕ್ಕೆ ಆಯ್ಕೆಯಾದ ನೀವುಗಳು ಅದೃಷ್ಟವಂತರಾಗಿರಿ, ಈ ಏಳು ದಿವಸಗಳ ಶಿಬಿರದಲ್ಲಿ ನನ್ನ ಜೊತೆಗೆ ಸಹಕರಿಸಿ, ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಹಿರಿಯ ಉಪನ್ಯಾಸಕರಾದ ಗುರುರಾಜ ಕುಲಕರ್ಣಿ ಎನ್.ಎಸ್.ಎಸ್. ಗೀತೆಯನ್ನು ಹಾಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಚಾರ್ಯರಾದ ದೇವನಗಗೌಡ ಪಾಟೀಲ್ ಅವರು ಮಾನ್ಯ ಉಪನಿರ್ದೇಶಕರ ಹೇಳಿದ ವೈಚಾರಿಕತೆಯನ್ನು ರೂಡಿಸಿಕೊಂಡು, ಈ ವಿಶೇಷ ಶಿಬಿರದಲ್ಲಿ, ಶ್ರಮದಾನದ ಜೊತೆಗೆ ಜೀವನ ಪಾಠಗಳನ್ನು ಕಲಿತುಕೊಳ್ಳಬೇಕು, ನಿಮ್ಮ ಜೀವನದಲ್ಲಿ ಈ ವಿಶೇಷ ಶಿಬಿರದ ದಿನಗಳು ನೆನಪಿಟ್ಟುಕೊಳ್ಳುವಂತೆ ತಾವೇಲಾ ಭಾಗವಹಿಸಬೇಕು ಎಂದರು.

ವೇದಿಕೆಯ ಮೇಲೆ ಹಿರಿಯ ಉಪನ್ಯಾಸಕರಾದ ಸೂರ್ಯವಂಶಿ, ಎನ್. ಆರ್. ಕುಲಕರ್ಣಿ, ಸಹ ಸಂಯೋಜಕರಾದ ಜಯಶ್ರೀ ಬಿರಾದಾರ ಉಪಸ್ಥಿತರಿದರು. ನಾಗರತ್ನಾ ಇಂಡೆ ಕಾರ್ಯಕ್ರಮವನ್ನು ನಿರೂಪಿಸಿದರು, ರವೀಂದ್ರ ಸಜ್ಜಿ ಉಪನ್ಯಾಸಕರು ವಂದಿಸಿದರು. ದದ್ದಾಪೂರ ಬಡಾವಣೆಯ ನಾಗರಿಕರು, ವಿಶೇಷ ಶಿಬಿರಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರು ಹಾಜರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420