ಚಿತ್ತಾಪುರ:ತಾಲ್ಲೂಕಿನ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಪ್ರಯುಕ್ತ ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮ ಸಡಗರದ ಮಧ್ಯೆ ನಡೆಯಲಿವೆ ಎಂದು ಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಠದ ಹಿಂದಿನ ಪೀಠಾಧಿಪತಿಗಳಾಗಿದ್ದ, ಪವಾಡ ಪುರುಷ ಲಿಂ.ತೋಟೇಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ,ಪ್ರಸ್ತುತ ಪೀಠಾಧಿಪತಿಗಳಾದ ಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನೋತ್ಸವ ಕಾರ್ಯಕ್ರಮ 23 ರ ಆಯುಧಪೂಜೆಯ ದಿನದಂದು ನಡೆಯಲಿವೆ. ತನ್ನಿಮಿತ್ತವಾಗಿ ವಿವಿಧ ಧಾರ್ಮಿಕ – ಸಾಂಸ್ಕೃತಿಕ – ಸಾಹಿತ್ಯಿಕ ಕಾರ್ಯಕ್ರಮಗಳು ನಡೆಯಲಿವೆ.
ನವರಾತ್ರಿ ಒಂಬತ್ತು ದಿನಗಳು ಪ್ರತಿದಿನ ಸಂಜೆ ಲಿಂ.ತೋಟೇಂದ್ರ ಶಿವಯೋಗಿಗಳ ಕರ್ತೃ ಗದ್ದುಗೆಗೆ ವಿಶೇಷ ಪೂಜೆ,ಪ್ರತಿದಿನ ಒಬ್ಬೊಬ್ಬ ಪ್ರಸಿದ್ಧ ಸಂಗೀತಗಾರರಿಂದ ವಿವಿಧ ವಾದ್ಯಗಳ ನಾದಾರ್ಚನೆ,ಪ್ರವಚನ ಕಾರ್ಯಕ್ರಮಗಳು ನಡೆಯಲಿವೆ.
23 ರಂದು ಆಯುಧಪೂಜೆಯ ದಿನದಂದು ಸಂಜೆ ನಾಡಿನ ಹರಗುರುಚರಮೂರ್ತಿಗಳ ಸಮ್ಮುಖ ಹಾಗೂ ಸಚಿವರು-ಶಾಸಕರ ಉಪಸ್ಥಿತಿಯಲ್ಲಿ ಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮ ವರ್ಧಂತಿ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದ್ದು,ಪುಸ್ತಕ ಬಿಡುಗಡೆ, ಧ್ವನಿಸುರುಳಿ ಲೋಕಾರ್ಪಣೆ, ಪೂಜ್ಯರ ತುಲಾಭಾರ,ಸಂಗೀತ ರಸಮಂಜರಿ,ಪ್ರಶಸ್ತಿ ಪ್ರದಾನ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳು ನಡೆಯಲಿವೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುವಿನ ಕೃಪೆಗೆ ಪಾತ್ರರಾಗಬೇಕು ಎಂದು ತಿಳಿಸಿದ್ದಾರೆ
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…